Latest

ನೈಕಿ, ಪೂಮಾ ಹೆಸರಿನಲ್ಲಿ ನಕಲಿ ಬಟ್ಟೆ ದಂಧೆ: ಸಿದ್ದಾಪುರದಲ್ಲಿ ಬೃಹತ್ ದಾಳಿ

ಬೆಂಗಳೂರು: ನಗರದ ಸಿದ್ದಾಪುರದಲ್ಲಿ ಹೆಸರಾಂತ ಬ್ರ್ಯಾಂಡ್‌ಗಳ ನಕಲಿ ಬಟ್ಟೆಗಳ ದಂಧೆ ಬೆಳಕಿಗೆ ಬಂದಿದೆ. ನೈಕಿ ಮತ್ತು ಪೂಮಾ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಬಟ್ಟೆ ಮಾರಾಟ ಮಾಡುತ್ತಿದ್ದ ದೊಡ್ಡ ಮಾಪದಾರದ ಗೋಡೌನ್ ಮೇಲೆ ಸಿದ್ದಾಪುರ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ.

ಆಧಿಕೃತ ಮಾಹಿತಿಯಂತೆ, ಸಿದ್ದಾಪುರದ ಭೈರಸಂದ್ರದಲ್ಲಿರುವ ಗೋಡೌನ್‌ನಲ್ಲಿ ನೈಕಿ, ಪೂಮಾ ಬ್ರ್ಯಾಂಡ್ ಹೆಸರು ಬಳಸಿ ಶರ್ಟ್, ಪ್ಯಾಂಟ್, ಟೀ-ಶರ್ಟ್, ಟ್ರಾಕ್ ಪ್ಯಾಂಟ್, ಒಳಉಡುಪು ಸೇರಿದಂತೆ ವಿವಿಧ ಬಟ್ಟೆಗಳನ್ನು ನಕಲಿ ರೂಪದಲ್ಲಿ ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಸುಮಾರು ₹8,000 ಮೌಲ್ಯದ ಬಟ್ಟೆಗಳನ್ನು ಕೇವಲ ₹2,000ಕ್ಕೆ ಸೇಲ್ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಈ ದಂಧೆ ಹಿಂದಿರುವ ವ್ಯಕ್ತಿಯಾಗಿ ಅವಿನಾಶ್ ಎಂಬುವವರನ್ನು ಗುರುತಿಸಲಾಗಿದೆ. ದೆಹಲಿಯಿಂದ ನಕಲಿ ಬಟ್ಟೆಗಳನ್ನು ಸಾಗತ್ತಿಸಿ, ಬೆಂಗಳೂರಿನಲ್ಲಿ ಅವುಗಳನ್ನು ಪಕ್ಕಾ ಬ್ರ್ಯಾಂಡ್‌ಗಳ ಲುಕ್‌ನಲ್ಲಿಗೆ ತಂದು ಮಾರಾಟ ಮಾಡುತ್ತಿದ್ದತನಕ ಮಾಹಿತಿ ಲಭ್ಯವಾಗಿದೆ.

ನೈಕಿ ಹಾಗೂ ಪೂಮಾ ಕಂಪನಿಗಳ ಪ್ರತಿನಿಧಿ ಶ್ರೀಜಿತ್ ಅವರು ನೀಡಿದ ದೂರಿನ ಮೇಲೆ ಸಿದ್ದಾಪುರ ಪೊಲೀಸರು ತಕ್ಷಣದ ಕ್ರಮವಾಗಿ ದಾಳಿ ನಡೆಸಿದ್ದು, ನಕಲಿ ಬಟ್ಟೆಗಳಿಂದ ತುಂಬಿದ್ದ ಗೋಡೌನ್‌ನ್ನು ಸೀಜ್ ಮಾಡಿದ್ದಾರೆ. ಪ್ರಕರಣವನ್ನು ಕಾಫಿರೈಟ್ಸ್ ಕಾಯ್ದೆಯಡಿ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಈ ಘಟನೆ ಸಿಟಿಯಲ್ಲಿ ನಕಲಿ ಬ್ರ್ಯಾಂಡ್ ದಂಧೆಯ ಅಸ್ತಿತ್ವವನ್ನು ಮತ್ತೊಮ್ಮೆ ದೃಢಪಡಿಸಿದ್ದು, ಗ್ರಾಹಕರು ಹೆಚ್ಚಿನ ಜಾಗೃತೆಯಿಂದ ಶಾಪಿಂಗ್ ಮಾಡಬೇಕಾದ ಅವಶ್ಯಕತೆ ಎತ್ತಿಹಿಡಿದಿದೆ.

nazeer ahamad

Recent Posts

ಹೋಟೆಲ್ ರೂಂನಲ್ಲಿ ಮಹಿಳೆಯೊಂದಿಗೆ ಅಧಿಕಾರಿಯಿದ್ದ ವಿಡಿಯೋ ವೈರಲ್: ವಿದ್ಯುತ್ ಇಲಾಖೆ ತನಿಖೆ!

ಲಖನೌ: ಸರ್ಕಾರಿ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಹೋಟೆಲ್ ಕೊಠಡಿಯಲ್ಲಿ ಇರುವ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ…

3 hours ago

ಲಾಡ್ಜ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ: ಆತ್ಮಹತ್ಯೆಗೆ ಕಾರಣ ನಿಗೂಢ

ಗೌರಿಬಿದನೂರು: ನಗರದ ಬೈಪಾಸ್ ರಸ್ತೆಯಲ್ಲಿರುವ ತೇಜಸ್ ಕಂಫರ್ಟ್ ಲಾಡ್ಜ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಒಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ…

5 hours ago

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

14 hours ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

14 hours ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

14 hours ago

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…

15 hours ago