Latest

ನೋಯ್ಡಾದಲ್ಲಿ ನಕಲಿ ಪನ್ನೀರ್ ಪತ್ತೆ: ಆರೋಗ್ಯಕ್ಕೆ ಭಾರೀ ಅಪಾಯ, ಎಚ್ಚರಿಕೆ ನೀಡಿದ ಇಲಾಖೆ

ನೋಯ್ಡಾ: ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಜನರಲ್ಲಿ ಹೆಚ್ಚಾದ ಎಚ್ಚರಿಕೆಯ ನಡುವೆಯೇ, ಮಾರುಕಟ್ಟೆಯಲ್ಲಿ ದೊರೆಯುವ “ಆರೋಗ್ಯಕರ” ಆಹಾರಗಳ ಬೆನ್ನಲ್ಲಿಯೇ ಆತಂಕಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಜನ ಸಾಮಾನ್ಯರು ಆರೋಗ್ಯವಂತಿಕೆಗಾಗಿ ತಿನ್ನುವ ಹಲವಾರು ಆಹಾರ ಪದಾರ್ಥಗಳು ನಿಜವಾಗಿ ದೇಹಕ್ಕೆ ಅಪಾಯಕಾರಿಯಾಗಿವೆ ಎಂಬುದು ಈಗ ಬಹಿರಂಗವಾಗಿದೆ.

ಇತ್ತೀಚೆಗೆ ನೋಯ್ಡಾದಲ್ಲಿ ನಡೆದ ದಾಳಿಯಲ್ಲಿ ನಕಲಿ ಪನ್ನೀರ್‌ ತಯಾರಿಸುತ್ತಿದ್ದ ಮಾಫಿಯಾ ಪತ್ತೆಯಾಗಿದ್ದು, ಸುಮಾರು 14 ಕ್ವಿಂಟಾಲ್ ನಕಲಿ ಪನ್ನೀರ್‌ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಾಚರಣೆಯು ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ನಕಲಿ ಪನ್ನೀರ್‌ – ಹೆಲ್ದಿ ಅಂತಲೇ ಭಯ!

ಪನ್ನೀರ್‌ ಎಂಬುದು ಸಾಮಾನ್ಯವಾಗಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂನಂತಹ ಪೌಷ್ಠಿಕಾಂಶಗಳಿಂದ ತುಂಬಿರುತ್ತದೆ. ಆದ್ದರಿಂದಲೇ ಹಲವರು ದಿನನಿತ್ಯವೂ ಪನ್ನೀರ್ ಸೇವಿಸುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ನಕಲಿ ಪನ್ನೀರ್‌ಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಈಗ ಇದರ ಸೇವನೆ ಭಯದ ಸಂಗತಿಯಾಗಿದೆ.

ಹೆಚ್ಚು ಲಾಭದ ಆಸೆಯಲ್ಲಿ ಇಂತಹ ನಕಲಿ ಪನ್ನೀರ್ ತಯಾರಕರ ಬಳಕೆ ಆಗುತ್ತಿರುವ ಕಚ್ಚಾ ವಸ್ತುಗಳು ಸಾಮಾನ್ಯ ಆರೋಗ್ಯ ಮಾಪದಂಡಗಳಿಗೆ ತಕ್ಕದ್ದಲ್ಲ. ಕಳಪೆ ಗುಣಮಟ್ಟದ ಪಾಮೋಲಿನ್ ಆಯಿಲ್‌, ಪೋಸ್ಟರ್ ವೈಟ್ನರ್, ಬ್ಲೂ ಬಾಕ್ಸ್ ಕೆಮಿಕಲ್ಸ್, ಮತ್ತು ರೆಡ್ ಬುಲ್ ಬೀನ್ಸ್ ಗೆ ಸಪ್ರೋಟಾ ಸೇರಿಸಿ ಕುದಿಸುವ ವಿಧಾನ ಮುಂತಾದ ಅಪಾಯಕಾರಿ ಪದಾರ್ಥಗಳನ್ನು ಬಳಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಹೃದಯದ ಮೇಲೆ ಹಾನಿ

ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈ ನಕಲಿ ಪನ್ನೀರ್‌ ದೀರ್ಘಕಾಲ ಸೇವನೆಯು ಹೃದಯದ ಮೇಲೆ ಹಾನಿಕಾರಕ ಪರಿಣಾಮ ಬೀರುವ ಸಾಧ್ಯತೆಯಿದೆ. ಪಾಮೋಲಿನ್ ಆಯಿಲ್‌ನ ಅತಿಯಾದ ಬಳಕೆ ಕೊರೊನರಿ ಆರೆಟರಿ ಸಮಸ್ಯೆಗಳಿಗೆ ಕಾರಣವಾಗಬಹುದೆಂಬ ಎಚ್ಚರಿಕೆಯಿದೆ.

6 ತಿಂಗಳ ಹಿಂದೆ ಆರಂಭವಾದ ಚಟುವಟಿಕೆ

ಅದರಲ್ಲೂ, ಈ ನಕಲಿ ಪನ್ನೀರ್‌ನ್ನು ಅಸಲಿ ಪನ್ನೀರ್‌ ಎಂಬ ನಾಮದಲ್ಲಿ ಎನ್‌ಸಿಆರ್‌ ಪ್ರದೇಶದ ಅಂಗಡಿಗಳಿಗೆ ₹180 ರಿಂದ ₹220 ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು. ಇದೀಗ ಬಂಧನದಲ್ಲಿರುವ ಆರೋಪಿಗಳು ತಮ್ಮ ನಕಲಿ ತಂತ್ರಗಳನ್ನು ಪೊಲೀಸರಿಗೆ ಬಿಚ್ಚಿಟ್ಟಿದ್ದಾರೆ. ಸಾರ್ವಜನಿಕರು ನಂಬಿಕೆಯಿಂದ ಖರೀದಿ ಮಾಡುತ್ತಿದ್ದ ಈ ಪನ್ನೀರ್ ನಿಜಕ್ಕೂ ಆರೋಗ್ಯದ ಮೇಲೆ ಬಾಂಬ್‌ ಎಂಬಂತಾಗಿತ್ತು.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

8 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

15 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

15 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago