ಬೆಂಗಳೂರು: ಪಾರ್ಕ್ಗಳಲ್ಲಿ ಕುಳಿತಿದ್ದ ಜೋಡಿಗಳನ್ನು ಟಾರ್ಗೆಟ್ ಮಾಡಿ ತಮ್ಮನ್ನು ಪೊಲೀಸ್ ಎಂದು ಪರಿಚಯಿಸಿಕೊಂಡು ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅನೀಫ್ ಖಾನ್ ಎಂದು ಗುರುತಿಸಲಾಗಿದೆ.
ಆಸಿಫ್ ಎಂಬಾತ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಕಾನೂನು ರಕ್ಷಕರಂತೆ ನಟನೆ ಮಾಡಿ ಯುವಜೋಡಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್ನಲ್ಲಿ ಕುಳಿತಿದ್ದವರ ಬಳಿ ಬಂದು, ಪೊಲೀಸ್ ತನಿಖೆ ಎಂದು ಭಯ ಹುಟ್ಟಿಸಿ ಹಣ ಹಾಗೂ ಆಭರಣ ಪಡೆದು ಪರಾರಿಯಾಗುತ್ತಿದ್ದ.
ಇತ್ತೀಚೆಗೆ, ಆಸಿಫ್ ಇಬ್ಬರು ವ್ಯಕ್ತಿಗಳಿಂದ 12 ಗ್ರಾಂ ಚಿನ್ನದ ಸರ, 5 ಗ್ರಾಂನ ಬೆಳ್ಳಿ ಉಂಗುರ ಹಾಗೂ ₹10,000 ನಗದು ಕಸಿದುಕೊಂಡು ತಪ್ಪಿಸಿಕೊಂಡಿದ್ದ. ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಆಸಿಫ್ ಈ ರೀತಿಯ ಹಲವಾರು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…