Latest

ನಕಲಿ ಎಸ್‌ಐ ಮೋನಾಳ ಡ್ರಾಮಾ: ಇಬ್ಬರು ತಮ್ಮರನ್ನು ಮೇಚ್ಚಿಸಲು ಪೊಲೀಸ್ ಅಕಾಡೆಮಿಯಲ್ಲಿ ಎರಡು ವರ್ಷ ವೇಷಧಾರಣೆ!

ಜೈಪುರ್ (ರಾಜಸ್ಥಾನ್): ರಾಜ್ಯದ ಪೊಲೀಸ್ ವ್ಯವಸ್ಥೆಯನ್ನೇ ಆಘಾತಕ್ಕೀಡು ಮಾಡಿರುವ ಘಟನೆ ಜೈಪುರದಲ್ಲಿ ಬೆಳಕಿಗೆ ಬಂದಿದೆ. ಸುಮಾರು ಎರಡು ವರ್ಷಗಳಿಂದ ನಕಲಿ ಸಬ್ ಇನ್‌ಸ್ಪೆಕ್ಟರ್ ಆಗಿ ಪೊಲೀಸ್ ಅಕಾಡೆಮಿಯಲ್ಲೇ ತರಬೇತಿಗೆ ಹಾಜರಾಗುತ್ತಿದ್ದ ಯುವತಿಯನ್ನು ಈಗ ಪೊಲೀಸರೇ ಬಂಧಿಸಿದ್ದಾರೆ. ವಾಸ್ತವವಾಗಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣವಾಗದೆ, ನಕಲಿ ಗುರುತು ಪತ್ರಗಳ ಆಧಾರದಲ್ಲಿ ಪೊಲೀಸ್ ವೇಷಧಾರಣೆ ಮಾಡಿಕೊಂಡು ಅಧಿಕೃತ ತರಬೇತಿಗಳಲ್ಲೇ ಪಾಲ್ಗೊಂಡಿದ್ದ ಅವಳು, ಹಿರಿಯ ಅಧಿಕಾರಿಗಳ ಜತೆ ಫೋಟೋ ತೆಗೆಸಿಕೊಂಡಿದ್ದ ದೃಶ್ಯಗಳು ಇದೀಗ ವೈರಲ್ ಆಗುತ್ತಿವೆ.

ಈ ಬಂಡವಾಳ ಮಹಿಳೆಯ ಹೆಸರು ಮೋನಾ ಬುಗಾಲಿಯಾ ಅka ಮೋಲಿ ದೇವಿ. ನಗೌರ್ ಜಿಲ್ಲೆಯ ನಿಂಬಾ ಕೇ ದಾಸ್ ಗ್ರಾಮದ ಟ್ರಕ್ ಚಾಲಕನ ಮಗಳು. 2021ರಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದಿದ್ದರೂ ಆಯ್ಕೆಯಾಗಲಿಲ್ಲ. ಆದರೆ ಅದರಿಂದ ಕೈಚೆಲ್ಲದೆ, ನಕಲಿ ದಾಖಲೆಗಳ ಮೂಲಕ ತರಬೇತಿ ಕೇಂದ್ರ ಪ್ರವೇಶಿಸಿ, ನಿಜವಾದ ಅಧಿಕಾರಿಯಂತೆ ವರ್ತಿಸುತ್ತಿದ್ದಳು.

ಸಾಮಾಜಿಕ ಜಾಲತಾಣಗಳಲ್ಲಿ ‘ಪೊಲೀಸ್ ಅಧಿಕಾರಿ’ಯ ವೇಷ

ಪರೀಕ್ಷೆಯಲ್ಲಿ ಅಯೋಗ್ಯವಾಗಿದ್ದರೂ, ಮೋಲಿ ‘ಕ್ರೀಡಾ ಮೀಸಲಾತಿ’ಯ ಅಡಿಯಲ್ಲಿ ನೇಮಕಗೊಂಡಿರುವುದಾಗಿ ನೆಪ ಹೇಳಿ, ನಿಜವಾದ ಎಸ್‌ಐಗಳ ವಾಟ್ಸಪ್ ಗುಂಪಿಗೆ ಸೇರಿ ಮಾಹಿತಿ ಸಂಗ್ರಹಿಸಿದ್ದಳು. ಇದರ ನೆರವಿನಿಂದ ಅಕಾಡೆಮಿಯ ಪರೇಡ್ ಮೈದಾನದಲ್ಲಿ ಹಾಜರಾಗಿ ತರಬೇತಿಯೊಳಗೆ ಸೇರ್ಪಡೆಯಾಗಿದ್ದಳು. ಪೋಸ್ಟ್‌ಗಳಲ್ಲಿ ತನ್ನನ್ನು ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ, ಸಮಾಜದಲ್ಲಿ ಪ್ರಭಾವ ಬೀರುವಂತೆಯೂ ಮಾಡಿಕೊಂಡಿದ್ದಳು.

ಅಕಾಡೆಮಿಯ ಭದ್ರತಾ ವ್ಯವಸ್ಥೆಗೆ ತೀವ್ರ ಪ್ರಶ್ನೆ

ಈಕೆಯ ವೇಷಭೂಷಣವನ್ನು ಇತ್ತೀಚೆಗೆ ಜೈಪುರದಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ವೇಳೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ತನಿಖೆ ಮುಂದುವರಿಸಿದ ಪೊಲೀಸರೇ ಶಾಕ್‌ಗೆ ಒಳಗಾಗಿದ್ದಾರೆ. ಸಿಕ್ಕರ್ ಜಿಲ್ಲೆಯಲ್ಲಿ ಬಂಧಿತಳಾದ ನಂತರ, 2023ರಿಂದಲೇ ತಾನು ಪೊಲೀಸ್ ಸಮವಸ್ತ್ರದಲ್ಲಿ ಅಕಾಡೆಮಿಯಲ್ಲಿ ಇದ್ದದ್ದು ಗೊತ್ತಾಗಿದೆ.

ಪೊಲೀಸರು ನಡೆಸಿದ ಸರ್ಜಿ ವೇಳೆ, ಆಕೆಯ ಕೊಠಡಿಯಲ್ಲಿ ಮೂರು ರೀತಿಯ ಸಮವಸ್ತ್ರ, 7 ಲಕ್ಷ ರೂಪಾಯಿ ನಗದು, ನಕಲಿ ಗುರುತುಪತ್ರಗಳು, ಪರೀಕ್ಷಾ ಮಾದರಿ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ.

ಮೂಲ ಉದ್ದೇಶ: ಹಣ ಹಾಗೂ ಕುಟುಂಬದ ಜವಾಬ್ದಾರಿ

ವಿಚಾರಣೆ ವೇಳೆ ಮೋಲಿ, ಈ ವಂಚನೆಗೆ ತನ್ನ ಕುಟುಂಬದ ಆರ್ಥಿಕ ಹಿನ್ನಲೆ ಕಾರಣ ಎಂದು ಹೇಳಿದ್ದಾಳೆ. ನಾಲ್ವರು ಸೋದರಿಯರ ಜವಾಬ್ದಾರಿ, ಹಾಗೂ ಪೋಷಕರನ್ನು ಮೆಚ್ಚಿಸಲು ತಾನೀ ದಾರಿ ಆರಿಸಿದ್ದೆನೆಂದು ಭಾವನಾತ್ಮಕವಾಗಿ ಹೇಳಿಕೊಂಡಿದ್ದಾಳೆ. ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡು, ಕೆಲವೊಮ್ಮೆ ಹಣ ವಸೂಲಿ ಮಾಡಿದ ಆರೋಪವೂ ಮೋಲಿಗೆ ಎದುರಾಗಿದ್ದು, ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago