ಧರ್ಮಸ್ಥಳ (ದಕ್ಷಿಣ ಕನ್ನಡ): ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ಗಂಭೀರ ಆರೋಪದ ಕುರಿತಂತೆ ಸಾಕ್ಷಿ ನೀಡಿದ ವ್ಯಕ್ತಿಯ ದೂರಿಗೆ ಸಂಬಂಧಿಸಿದಂತೆ, ಕೃತಕ ಬುದ್ಧಿಮತ್ತೆ (ಎಐ) ಮೂಲಕ ಸುಳ್ಳು ಮಾಹಿತಿಗಳನ್ನು ತಯಾರಿಸಿ ವೀಡಿಯೋ ರೂಪದಲ್ಲಿ ಯೂಟ್ಯೂಬ್ನಲ್ಲಿ ಪ್ರಸಾರ ಮಾಡಿದ ಆರೋಪದ ಮೇರೆಗೆ, ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಾರ, ಈ ವೀಡಿಯೋದಲ್ಲಿ ಪ್ರಕರಣದ ಮೂಲ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳ ಹೊರತಾಗಿ, ಸಾಕ್ಷಿದಾರರ ಬಗ್ಗೆ ಅಸತ್ಯ ಹಾಗೂ ತಪ್ಪು ಮಾಹಿತಿಗಳನ್ನು ಹರಡಲಾಗಿದೆ. ಎಐ ಮೂಲಕ ನಿರ್ಧಿಷ್ಟ ಉದ್ದೇಶದೊಂದಿಗೆ ಸೃಷ್ಟಿಸಲಾದ ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದು, ಸಾರ್ವಜನಿಕರಲ್ಲಿ ಭಾವನಾತ್ಮಕ ಉದ್ರೇಕ ಉಂಟಾಗುವಂತ ಪರಿಸ್ಥಿತಿಯನ್ನುಂಟುಮಾಡಿದೆ.
ಈ ಹಿನ್ನಲೆಯಲ್ಲಿ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಮೀರ್ ಎಂ.ಡಿ ವಿರುದ್ಧ ಭಾರತ ರಾಷ್ಟ್ರೀಯ ಅಪರಾಧ ಸಂಹಿತೆ (BNS) ಸೆಕ್ಷನ್ಗಳಾದ 192 (ತಪ್ಪು ಮಾಹಿತಿಯ ಹರಡುವಿಕೆ), 240 (ಸಾಮಾನ್ಯ ಭದ್ರತೆಗೆ ಧಕ್ಕೆಯಾಗುವಂತಹ ಕ್ರಿಯೆ), ಮತ್ತು 353(1)(b) (ಸಾಮಾಜಿಕ ಶಾಂತಿ ಹಾಳುಮಾಡುವ ಉದ್ದೇಶದ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಈ ಸಂಬಂಧ ಮುಂದಿನ ತನಿಖೆ ಮುಂದುವರೆಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹೈದರಾಬಾದ್, ಜುಲೈ 31: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಲ್ಯವಿವಾಹದ ಸಂಸ್ಕೃತಿಯ ಕುರಿತಂತೆ ಆತಂಕ ಹೆಚ್ಚಿಸುವ ಘಟನೆ ಬೆಳಕಿಗೆ ಬಂದಿದೆ. ಕೇವಲ…
ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ…
ಮುಂಡಗೋಡ: ತಾಲೂಕಿನ ಕಾತೂರ ವಲಯದ ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಹೊಲದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು…
ಬೆಂಗಳೂರು – ನಟಿ ರಮ್ಯಾ ಮತ್ತು ನಟ ದರ್ಶನ್ ಅವರ ಅಭಿಮಾನಿಗಳ ನಡುವಿನ ಸಾಮಾಜಿಕ ಮಾಧ್ಯಮ ಜಟಾಪಟಿಗೆ ಸಂಬಂಧಿಸಿದಂತೆ ಇದೀಗ…
ಮಂಡ್ಯ, ಜುಲೈ 31: "ನಟ ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಜವಾಬ್ದಾರಿತನದ ಮೂಲಕ ಕೆಟ್ಟ ಕಾಮೆಂಟ್ಗಳು ಮಾಡುತ್ತಿರುವುದು ಅನಾವಶ್ಯಕ.…
ಯಾದಗಿರಿ: ಪ್ರಯಾಣಿಕರ ಪಯಣಕ್ಕೆ ಅವಶ್ಯಕವಾದ ಟಿಕೆಟ್ ನೀಡದೆ, ಸಾರ್ವಜನಿಕ ಸೇವೆಯ ಹೊಣೆಗಾರಿಕೆಯನ್ನು ಕಡೆಗಣಿಸಿದ ಘಟನೆಯೊಂದು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಬೆಳಕಿಗೆ…