ಧರ್ಮಸ್ಥಳ (ದಕ್ಷಿಣ ಕನ್ನಡ): ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ಗಂಭೀರ ಆರೋಪದ ಕುರಿತಂತೆ ಸಾಕ್ಷಿ ನೀಡಿದ ವ್ಯಕ್ತಿಯ ದೂರಿಗೆ ಸಂಬಂಧಿಸಿದಂತೆ, ಕೃತಕ ಬುದ್ಧಿಮತ್ತೆ (ಎಐ) ಮೂಲಕ ಸುಳ್ಳು ಮಾಹಿತಿಗಳನ್ನು ತಯಾರಿಸಿ ವೀಡಿಯೋ ರೂಪದಲ್ಲಿ ಯೂಟ್ಯೂಬ್ನಲ್ಲಿ ಪ್ರಸಾರ ಮಾಡಿದ ಆರೋಪದ ಮೇರೆಗೆ, ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಾರ, ಈ ವೀಡಿಯೋದಲ್ಲಿ ಪ್ರಕರಣದ ಮೂಲ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳ ಹೊರತಾಗಿ, ಸಾಕ್ಷಿದಾರರ ಬಗ್ಗೆ ಅಸತ್ಯ ಹಾಗೂ ತಪ್ಪು ಮಾಹಿತಿಗಳನ್ನು ಹರಡಲಾಗಿದೆ. ಎಐ ಮೂಲಕ ನಿರ್ಧಿಷ್ಟ ಉದ್ದೇಶದೊಂದಿಗೆ ಸೃಷ್ಟಿಸಲಾದ ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದು, ಸಾರ್ವಜನಿಕರಲ್ಲಿ ಭಾವನಾತ್ಮಕ ಉದ್ರೇಕ ಉಂಟಾಗುವಂತ ಪರಿಸ್ಥಿತಿಯನ್ನುಂಟುಮಾಡಿದೆ.
ಈ ಹಿನ್ನಲೆಯಲ್ಲಿ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಮೀರ್ ಎಂ.ಡಿ ವಿರುದ್ಧ ಭಾರತ ರಾಷ್ಟ್ರೀಯ ಅಪರಾಧ ಸಂಹಿತೆ (BNS) ಸೆಕ್ಷನ್ಗಳಾದ 192 (ತಪ್ಪು ಮಾಹಿತಿಯ ಹರಡುವಿಕೆ), 240 (ಸಾಮಾನ್ಯ ಭದ್ರತೆಗೆ ಧಕ್ಕೆಯಾಗುವಂತಹ ಕ್ರಿಯೆ), ಮತ್ತು 353(1)(b) (ಸಾಮಾಜಿಕ ಶಾಂತಿ ಹಾಳುಮಾಡುವ ಉದ್ದೇಶದ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಈ ಸಂಬಂಧ ಮುಂದಿನ ತನಿಖೆ ಮುಂದುವರೆಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…