Categories: CrimeLatest

ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಲಿಯಾದ ಸಂಸಾರ: ವಿಡಿಯೋ ಮಾಡಿ ಹೋಂ ಗಾರ್ಡ್ ಪತ್ನಿಯನ್ನು ಹತ್ಯೆಗೈದ ಪತಿ ಪರಾರಿ

ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ವ್ಯಸನದಿಂದ ಕುಟುಂಬ ಜೀವನ ಸಂಪೂರ್ಣ ಹಾಳಾಗಿದೆ ಎಂದು ಆರೋಪಿಸಿ ಪತಿಯೊಬ್ಬ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಮೃತ ಮಹಿಳೆಯನ್ನು 32 ವರ್ಷದ ಮಂಜುಳಾ ಎಂದು ಗುರುತಿಸಲಾಗಿದ್ದು, ಅವರು ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರೋಪಿಯಾಗಿರುವ ಪತಿ ಪ್ರದೀಪ್, ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಷ್ಪಾಂಜಲಿ ಥಿಯೇಟರ್ ಸಮೀಪದ ನಿವಾಸದಲ್ಲಿ ಭಾನುವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ಹತ್ಯೆಗೂ ಮುನ್ನ ಪ್ರದೀಪ್ ತನ್ನ ಮೊಬೈಲ್‌ನಲ್ಲಿ ವಿಡಿಯೋ ದಾಖಲಿಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ವಿಡಿಯೋದಲ್ಲಿ, ಆನ್‌ಲೈನ್ ಬೆಟ್ಟಿಂಗ್ ಚಟದಿಂದ ತನ್ನ ಕುಟುಂಬ ನಾಶವಾಗಿದೆ ಎಂದು ಆರೋಪಿಸಿರುವ ಪ್ರದೀಪ್, ತಾನು ಜೀವ ಕಳೆದುಕೊಳ್ಳುವುದರ ಜೊತೆಗೆ ತನ್ನ ಪತ್ನಿಯೂ ಬದುಕುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಅಲ್ಲದೆ, ಪತ್ನಿ ಮಂಜುಳಾ ತನ್ನ ತಾಯಿ ಹಾಗೂ ಸಹೋದರಿಯ ಪ್ರಭಾವಕ್ಕೆ ಒಳಗಾಗಿ ಬದಲಾಗಿದ್ದಾಳೆ ಎಂಬ ಆರೋಪವನ್ನೂ ವಿಡಿಯೋದಲ್ಲಿ ಮಾಡಿರುವುದಾಗಿ ತಿಳಿದುಬಂದಿದೆ.

ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಂಜುಳಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಹತ್ಯೆಯ ನಿಖರ ಕಾರಣ ಹಾಗೂ ಹಿನ್ನೆಲೆ ಕುರಿತು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ದಿನಕ್ಕೆ 500 ರೂ. ಸಂಬಳದಿಂದ ಸ್ಟಾರ್ ನಟಿಯವರೆಗೆ: ಸಮಂತಾ ಜೀವನದ ರೋಚಕ ಕಥೆ ಬಹಿರಂಗ!

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳ ಕುರಿತಾಗಿ ಹಲವು ಆಸಕ್ತಿಕರ ಸಂಗತಿಗಳನ್ನು…

10 hours ago

ದಾವಣಗೆರೆ ಉಪಚುನಾವಣೆ ಎಫೆಕ್ಟ್: ಜಮೀರ್‌ಗೆ ಸಚಿವ ಸ್ಥಾನ ಕೈತಪ್ಪುತ್ತಾ? ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ!

ಬೆಂಗಳೂರು: ದಾವಣಗೆರೆ ಉಪಚುನಾವಣೆ ಮುಗಿದು ಹಲವು ತಿಂಗಳುಗಳಾಗಿದ್ದರೂ ಅದರ ರಾಜಕೀಯ ಪರಿಣಾಮಗಳು ಇನ್ನೂ ಕಾಂಗ್ರೆಸ್ ಪಕ್ಷದೊಳಗೆ ಚರ್ಚೆಯ ವಿಷಯವಾಗಿವೆ. ಉಪಚುನಾವಣೆಯ…

10 hours ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ: ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ

ಬೆಂಗಳೂರು: ಖ್ಯಾತ ಸಾಹಿತಿ, ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕರಾದ ದಿವಂಗತ ಪಿ. ಲಂಕೇಶ್ ಅವರ ಪತ್ನಿ, ಹಿರಿಯ ಲೇಖಕಿ ಇಂದಿರಾ…

10 hours ago

ಜೈಪುರದಲ್ಲಿ ಲಂಚ ಪಡೆಯುತ್ತಿದ್ದ ಬೆಂಗಳೂರು ಪೊಲೀಸರು ಎಸಿಬಿ ಬಲೆಗೆ: ಎಚ್‌ಎಎಲ್ ಠಾಣೆಯ ಮೂವರ ಬಂಧನ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮೂವರು ಪೊಲೀಸರು ಲಂಚ ಸ್ವೀಕರಿಸುವ…

14 hours ago

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಸ್ಟಂಟ್ ಅಳವಡಿಕೆ, ಆರೋಗ್ಯ ಸ್ಥಿರ

ಬೆಂಗಳೂರು: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ತಕ್ಷಣ…

14 hours ago

ರೇಣುಕಾಸ್ವಾಮಿ ಪ್ರಕರಣದ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕರ ಹತ್ಯೆ: ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನನ್ನು ಕೊಂದು ಶವ ಸುಟ್ಟ ದಂಪತಿ!

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬೆನ್ನಲ್ಲೇ ಬಳ್ಳಾರಿ ಜಿಲ್ಲೆಯಲ್ಲೂ ಅದೇ ಮಾದರಿಯ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ…

14 hours ago