Latest

ಒಂದು ಮಾಡುವುದಾಗಿ ನಂಬಿಸಿ ಪ್ರೇಮಿಗಳಿಬ್ಬರನ್ನು ಕೊಂದ ಕುಟುಂಬಸ್ಥರು!

ಬಾಗಲಕೋಟೆಯಲ್ಲಿ ಕಾಣೆಯಾಗಿದ್ದ ಪ್ರೇಮಿಗಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಗಳ ಪ್ರೀತಿಗೆ ವಿರೋಧಿಸಿ ಕುಟುಂಬದವರಿಂದಲೇ ಇಬ್ಬರನ್ನು ಕೊಲೆ ಮಾಡಲಾಗಿದೆ.
ವಿಶ್ವನಾಥ(22), ರಾಜೇಶ್ವರಿ(17) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ, ಹನುಮಂತ, ಬೀರಪ್ಪ ಅವರನ್ನು ಬಂಧಿಸಲಾಗಿದೆ. ವೇಲ್ ನಿಂದ ಕತ್ತು ಬಿಗಿದು ರಾಜೇಶ್ವರಿಯ ಕೊಲೆ ಮಾಡಲಾಗಿದೆ. ಸಹೋದರ ಹಾಗೂ ಮಾವಂದಿರು ರಾಜೇಶ್ವರಿ ಕೊಲೆ ಮಾಡಿದ್ದಾರೆ. ವಿಶ್ವನಾಥನ ಮರ್ಮಾಂಗ, ಎದೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ.
ಇಬ್ಬರನ್ನು ಒಂದು ಮಾಡುವುದಾಗಿ ನಂಬಿಸಿ ವಾಹನದಲ್ಲಿ ಕರೆದುಕೊಂಡು ಬಂದಿದ್ದು, ವಾಹನದಲ್ಲೇ ಇಬ್ಬರನ್ನು ಕೊಲೆ ಮಾಡಿದ್ದಾರೆ. ನಂತರ ಕೃಷ್ಣಾ ನದಿಗೆ ಮೃತ ದೇಹಗಳನ್ನು ಎಸೆದಿದ್ದಾರೆ. ಅಕ್ಟೋಬರ್ 11 ರಂದು ರಾತ್ರಿ ಪುತ್ರಿ ಅಪಹರಣದ ಬಗ್ಗೆ ಕೊಲೆಯಾದ ರಾಜೇಶ್ವರಿ ತಂದೆ ಪರಸಪ್ಪ ದೂರು ನೀಡಿದ್ದ. ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಕ್ಟೋಬರ್ 3 ರಂದು ವಿಶ್ವನಾಥ ಕಾಣೆಯಾದ ಬಗ್ಗೆ ಗದಗ ಜಿಲ್ಲೆ ನರಗುಂದ ಠಾಣೆಗೆ ವಿಶ್ವನಾಥನ ತಂದೆ ದೂರು ನೀಡಿದ್ದರು. ಅಕ್ಟೋಬರ್ 15 ರಂದು ರಾಜೇಶ್ವರಿ ಅಣ್ಣ ರವಿಯನ್ನು ಸಂಶಯದ ಮೇಲೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕು ಬಂದಿದೆ. ನದಿಯಲ್ಲಿ ಇನ್ನು ವಿಶ್ವನಾಥ, ರಾಜೇಶ್ವರಿ ಶವ ಪತ್ತೆಯಾಗಿಲ್ಲವೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

8 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

9 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

21 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

21 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

21 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

21 hours ago