ಬಾಗಲಕೋಟೆಯಲ್ಲಿ ಕಾಣೆಯಾಗಿದ್ದ ಪ್ರೇಮಿಗಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಗಳ ಪ್ರೀತಿಗೆ ವಿರೋಧಿಸಿ ಕುಟುಂಬದವರಿಂದಲೇ ಇಬ್ಬರನ್ನು ಕೊಲೆ ಮಾಡಲಾಗಿದೆ.
ವಿಶ್ವನಾಥ(22), ರಾಜೇಶ್ವರಿ(17) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ, ಹನುಮಂತ, ಬೀರಪ್ಪ ಅವರನ್ನು ಬಂಧಿಸಲಾಗಿದೆ. ವೇಲ್ ನಿಂದ ಕತ್ತು ಬಿಗಿದು ರಾಜೇಶ್ವರಿಯ ಕೊಲೆ ಮಾಡಲಾಗಿದೆ. ಸಹೋದರ ಹಾಗೂ ಮಾವಂದಿರು ರಾಜೇಶ್ವರಿ ಕೊಲೆ ಮಾಡಿದ್ದಾರೆ. ವಿಶ್ವನಾಥನ ಮರ್ಮಾಂಗ, ಎದೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ.
ಇಬ್ಬರನ್ನು ಒಂದು ಮಾಡುವುದಾಗಿ ನಂಬಿಸಿ ವಾಹನದಲ್ಲಿ ಕರೆದುಕೊಂಡು ಬಂದಿದ್ದು, ವಾಹನದಲ್ಲೇ ಇಬ್ಬರನ್ನು ಕೊಲೆ ಮಾಡಿದ್ದಾರೆ. ನಂತರ ಕೃಷ್ಣಾ ನದಿಗೆ ಮೃತ ದೇಹಗಳನ್ನು ಎಸೆದಿದ್ದಾರೆ. ಅಕ್ಟೋಬರ್ 11 ರಂದು ರಾತ್ರಿ ಪುತ್ರಿ ಅಪಹರಣದ ಬಗ್ಗೆ ಕೊಲೆಯಾದ ರಾಜೇಶ್ವರಿ ತಂದೆ ಪರಸಪ್ಪ ದೂರು ನೀಡಿದ್ದ. ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಕ್ಟೋಬರ್ 3 ರಂದು ವಿಶ್ವನಾಥ ಕಾಣೆಯಾದ ಬಗ್ಗೆ ಗದಗ ಜಿಲ್ಲೆ ನರಗುಂದ ಠಾಣೆಗೆ ವಿಶ್ವನಾಥನ ತಂದೆ ದೂರು ನೀಡಿದ್ದರು. ಅಕ್ಟೋಬರ್ 15 ರಂದು ರಾಜೇಶ್ವರಿ ಅಣ್ಣ ರವಿಯನ್ನು ಸಂಶಯದ ಮೇಲೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕು ಬಂದಿದೆ. ನದಿಯಲ್ಲಿ ಇನ್ನು ವಿಶ್ವನಾಥ, ರಾಜೇಶ್ವರಿ ಶವ ಪತ್ತೆಯಾಗಿಲ್ಲವೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…