ಬಾಗಲಕೋಟೆಯಲ್ಲಿ ಕಾಣೆಯಾಗಿದ್ದ ಪ್ರೇಮಿಗಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಗಳ ಪ್ರೀತಿಗೆ ವಿರೋಧಿಸಿ ಕುಟುಂಬದವರಿಂದಲೇ ಇಬ್ಬರನ್ನು ಕೊಲೆ ಮಾಡಲಾಗಿದೆ.
ವಿಶ್ವನಾಥ(22), ರಾಜೇಶ್ವರಿ(17) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ, ಹನುಮಂತ, ಬೀರಪ್ಪ ಅವರನ್ನು ಬಂಧಿಸಲಾಗಿದೆ. ವೇಲ್ ನಿಂದ ಕತ್ತು ಬಿಗಿದು ರಾಜೇಶ್ವರಿಯ ಕೊಲೆ ಮಾಡಲಾಗಿದೆ. ಸಹೋದರ ಹಾಗೂ ಮಾವಂದಿರು ರಾಜೇಶ್ವರಿ ಕೊಲೆ ಮಾಡಿದ್ದಾರೆ. ವಿಶ್ವನಾಥನ ಮರ್ಮಾಂಗ, ಎದೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ.
ಇಬ್ಬರನ್ನು ಒಂದು ಮಾಡುವುದಾಗಿ ನಂಬಿಸಿ ವಾಹನದಲ್ಲಿ ಕರೆದುಕೊಂಡು ಬಂದಿದ್ದು, ವಾಹನದಲ್ಲೇ ಇಬ್ಬರನ್ನು ಕೊಲೆ ಮಾಡಿದ್ದಾರೆ. ನಂತರ ಕೃಷ್ಣಾ ನದಿಗೆ ಮೃತ ದೇಹಗಳನ್ನು ಎಸೆದಿದ್ದಾರೆ. ಅಕ್ಟೋಬರ್ 11 ರಂದು ರಾತ್ರಿ ಪುತ್ರಿ ಅಪಹರಣದ ಬಗ್ಗೆ ಕೊಲೆಯಾದ ರಾಜೇಶ್ವರಿ ತಂದೆ ಪರಸಪ್ಪ ದೂರು ನೀಡಿದ್ದ. ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಕ್ಟೋಬರ್ 3 ರಂದು ವಿಶ್ವನಾಥ ಕಾಣೆಯಾದ ಬಗ್ಗೆ ಗದಗ ಜಿಲ್ಲೆ ನರಗುಂದ ಠಾಣೆಗೆ ವಿಶ್ವನಾಥನ ತಂದೆ ದೂರು ನೀಡಿದ್ದರು. ಅಕ್ಟೋಬರ್ 15 ರಂದು ರಾಜೇಶ್ವರಿ ಅಣ್ಣ ರವಿಯನ್ನು ಸಂಶಯದ ಮೇಲೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕು ಬಂದಿದೆ. ನದಿಯಲ್ಲಿ ಇನ್ನು ವಿಶ್ವನಾಥ, ರಾಜೇಶ್ವರಿ ಶವ ಪತ್ತೆಯಾಗಿಲ್ಲವೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…