Latest

ಒಂದು ಮಾಡುವುದಾಗಿ ನಂಬಿಸಿ ಪ್ರೇಮಿಗಳಿಬ್ಬರನ್ನು ಕೊಂದ ಕುಟುಂಬಸ್ಥರು!

ಬಾಗಲಕೋಟೆಯಲ್ಲಿ ಕಾಣೆಯಾಗಿದ್ದ ಪ್ರೇಮಿಗಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಗಳ ಪ್ರೀತಿಗೆ ವಿರೋಧಿಸಿ ಕುಟುಂಬದವರಿಂದಲೇ ಇಬ್ಬರನ್ನು ಕೊಲೆ ಮಾಡಲಾಗಿದೆ.
ವಿಶ್ವನಾಥ(22), ರಾಜೇಶ್ವರಿ(17) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ, ಹನುಮಂತ, ಬೀರಪ್ಪ ಅವರನ್ನು ಬಂಧಿಸಲಾಗಿದೆ. ವೇಲ್ ನಿಂದ ಕತ್ತು ಬಿಗಿದು ರಾಜೇಶ್ವರಿಯ ಕೊಲೆ ಮಾಡಲಾಗಿದೆ. ಸಹೋದರ ಹಾಗೂ ಮಾವಂದಿರು ರಾಜೇಶ್ವರಿ ಕೊಲೆ ಮಾಡಿದ್ದಾರೆ. ವಿಶ್ವನಾಥನ ಮರ್ಮಾಂಗ, ಎದೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ.
ಇಬ್ಬರನ್ನು ಒಂದು ಮಾಡುವುದಾಗಿ ನಂಬಿಸಿ ವಾಹನದಲ್ಲಿ ಕರೆದುಕೊಂಡು ಬಂದಿದ್ದು, ವಾಹನದಲ್ಲೇ ಇಬ್ಬರನ್ನು ಕೊಲೆ ಮಾಡಿದ್ದಾರೆ. ನಂತರ ಕೃಷ್ಣಾ ನದಿಗೆ ಮೃತ ದೇಹಗಳನ್ನು ಎಸೆದಿದ್ದಾರೆ. ಅಕ್ಟೋಬರ್ 11 ರಂದು ರಾತ್ರಿ ಪುತ್ರಿ ಅಪಹರಣದ ಬಗ್ಗೆ ಕೊಲೆಯಾದ ರಾಜೇಶ್ವರಿ ತಂದೆ ಪರಸಪ್ಪ ದೂರು ನೀಡಿದ್ದ. ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಕ್ಟೋಬರ್ 3 ರಂದು ವಿಶ್ವನಾಥ ಕಾಣೆಯಾದ ಬಗ್ಗೆ ಗದಗ ಜಿಲ್ಲೆ ನರಗುಂದ ಠಾಣೆಗೆ ವಿಶ್ವನಾಥನ ತಂದೆ ದೂರು ನೀಡಿದ್ದರು. ಅಕ್ಟೋಬರ್ 15 ರಂದು ರಾಜೇಶ್ವರಿ ಅಣ್ಣ ರವಿಯನ್ನು ಸಂಶಯದ ಮೇಲೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕು ಬಂದಿದೆ. ನದಿಯಲ್ಲಿ ಇನ್ನು ವಿಶ್ವನಾಥ, ರಾಜೇಶ್ವರಿ ಶವ ಪತ್ತೆಯಾಗಿಲ್ಲವೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago