Latest

ಅನಧಿಕೃತ ವಿದ್ಯುತ್ ಸಂಪರ್ಕದ ವೈರ್ ತುಳಿದು ಸ್ಥಳದಲ್ಲೇ ಮೃತಪಟ್ಟ ರೈತ

ಮುಂಡಗೋಡ:- ಓಣಿಕೇರಿಯಲ್ಲಿ ಬೋರ್ವೆಲ್ ಪಂಪ್ಸೆಟ್ ಗೆ ಅನಧಿಕೃತ ವಿದ್ಯುತ್ ಸಂಪರ್ಕ ಪಡೆದು ಕಾಡುಪ್ರಾಣಿಗಳಿಂದ ಬೆಳೆಯನ್ನು ರಕ್ಷಿಸಲು ಹಾಕಿದ ತಂತಿಗೆ ಹಾನಗಲ್ ತಾಲೂಕಿನ ಬಾಳಂಬಿಡ್ ಗ್ರಾಮದ ಬಸವರಾಜ ಚಂದ್ರಪ್ಪ ಹರಿಜನ ಎನ್ನುವ ಯುವಕ ಮೃತಪಟ್ಟ ಪ್ರಕರಣ ಮಾಸುವ ಮುನ್ನವೇ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೂಂದು ವಿದ್ಯುತ್ ದುರಂತ ಸಂಭವಿಸಿದೆ.
ಅನಧೀಕೃತವಾಗಿ ವಿದ್ಯುತ್ ಕಂಬದಿಂದ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ ಹೋಗಿ ಹುಡುಕಾಡಿದ್ದಾರೆ. ಆ ವೇಳೆ ಆ ವ್ಯಕ್ತಿಯ ಶವವಾಗಿ ದೊರೆತಿದ್ದು, ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ.

ಅಂದಹಾಗೆ, ಪಕ್ಕದ ಗದ್ದೆಯ ಮೋಹನ್ ಸಹದೇವಪ್ಪ ಪಾಟೀಲ್ ಎಂಬುವವರು, ತಮ್ಮ ಬೋರವೆಲ್ ಗೆ ವಿದ್ಯುತ್ ಸಂಪರ್ಕ ಕಲ್ಪಸಲಿಸಲು, ಮೃತ ವ್ಯಕ್ತಿಯ ಗದ್ದೆಯಲ್ಲಿರೋ ವಿದ್ಯುತ್ ಕಂಬದಿಂದ ಅನಧೀಕೃತವಾಗಿ ವೈಯರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದ ಎನ್ನಲಾಗಿದೆ. ಹಾಗೆ ಸಂಪರ್ಕ ಕಲ್ಪಿಸಿಕೊಂಡಿದ್ದ ವೈಯರ್ ತುಂಡಾಗಿದ್ದು, ಅದರಲ್ಲಿ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಮೃತ ಶಿವಪ್ಪ ನಾಗಪ್ಪ ವಡ್ಡರ ಆ ವೈಯರ್ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮುಂಡಗೋಡ ಕ್ರೈಂ ಪಿಎಸ್ಐ ಹನ್ಮಂತ್ ಗುಡುಗುಂಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮೋಹನ್ ಸಹದೇವಪ್ಪ ಪಾಟೀಲ್ ಅವರು ಮೇಲೆ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago