Latest

ಅನಧಿಕೃತ ವಿದ್ಯುತ್ ಸಂಪರ್ಕದ ವೈರ್ ತುಳಿದು ಸ್ಥಳದಲ್ಲೇ ಮೃತಪಟ್ಟ ರೈತ

ಮುಂಡಗೋಡ:- ಓಣಿಕೇರಿಯಲ್ಲಿ ಬೋರ್ವೆಲ್ ಪಂಪ್ಸೆಟ್ ಗೆ ಅನಧಿಕೃತ ವಿದ್ಯುತ್ ಸಂಪರ್ಕ ಪಡೆದು ಕಾಡುಪ್ರಾಣಿಗಳಿಂದ ಬೆಳೆಯನ್ನು ರಕ್ಷಿಸಲು ಹಾಕಿದ ತಂತಿಗೆ ಹಾನಗಲ್ ತಾಲೂಕಿನ ಬಾಳಂಬಿಡ್ ಗ್ರಾಮದ ಬಸವರಾಜ ಚಂದ್ರಪ್ಪ ಹರಿಜನ ಎನ್ನುವ ಯುವಕ ಮೃತಪಟ್ಟ ಪ್ರಕರಣ ಮಾಸುವ ಮುನ್ನವೇ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೂಂದು ವಿದ್ಯುತ್ ದುರಂತ ಸಂಭವಿಸಿದೆ.
ಅನಧೀಕೃತವಾಗಿ ವಿದ್ಯುತ್ ಕಂಬದಿಂದ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ ಹೋಗಿ ಹುಡುಕಾಡಿದ್ದಾರೆ. ಆ ವೇಳೆ ಆ ವ್ಯಕ್ತಿಯ ಶವವಾಗಿ ದೊರೆತಿದ್ದು, ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ.

ಅಂದಹಾಗೆ, ಪಕ್ಕದ ಗದ್ದೆಯ ಮೋಹನ್ ಸಹದೇವಪ್ಪ ಪಾಟೀಲ್ ಎಂಬುವವರು, ತಮ್ಮ ಬೋರವೆಲ್ ಗೆ ವಿದ್ಯುತ್ ಸಂಪರ್ಕ ಕಲ್ಪಸಲಿಸಲು, ಮೃತ ವ್ಯಕ್ತಿಯ ಗದ್ದೆಯಲ್ಲಿರೋ ವಿದ್ಯುತ್ ಕಂಬದಿಂದ ಅನಧೀಕೃತವಾಗಿ ವೈಯರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದ ಎನ್ನಲಾಗಿದೆ. ಹಾಗೆ ಸಂಪರ್ಕ ಕಲ್ಪಿಸಿಕೊಂಡಿದ್ದ ವೈಯರ್ ತುಂಡಾಗಿದ್ದು, ಅದರಲ್ಲಿ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಮೃತ ಶಿವಪ್ಪ ನಾಗಪ್ಪ ವಡ್ಡರ ಆ ವೈಯರ್ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮುಂಡಗೋಡ ಕ್ರೈಂ ಪಿಎಸ್ಐ ಹನ್ಮಂತ್ ಗುಡುಗುಂಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮೋಹನ್ ಸಹದೇವಪ್ಪ ಪಾಟೀಲ್ ಅವರು ಮೇಲೆ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

4 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

17 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

19 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago