Latest

ಅನಧಿಕೃತ ವಿದ್ಯುತ್ ಸಂಪರ್ಕದ ವೈರ್ ತುಳಿದು ಸ್ಥಳದಲ್ಲೇ ಮೃತಪಟ್ಟ ರೈತ

ಮುಂಡಗೋಡ:- ಓಣಿಕೇರಿಯಲ್ಲಿ ಬೋರ್ವೆಲ್ ಪಂಪ್ಸೆಟ್ ಗೆ ಅನಧಿಕೃತ ವಿದ್ಯುತ್ ಸಂಪರ್ಕ ಪಡೆದು ಕಾಡುಪ್ರಾಣಿಗಳಿಂದ ಬೆಳೆಯನ್ನು ರಕ್ಷಿಸಲು ಹಾಕಿದ ತಂತಿಗೆ ಹಾನಗಲ್ ತಾಲೂಕಿನ ಬಾಳಂಬಿಡ್ ಗ್ರಾಮದ ಬಸವರಾಜ ಚಂದ್ರಪ್ಪ ಹರಿಜನ ಎನ್ನುವ ಯುವಕ ಮೃತಪಟ್ಟ ಪ್ರಕರಣ ಮಾಸುವ ಮುನ್ನವೇ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೂಂದು ವಿದ್ಯುತ್ ದುರಂತ ಸಂಭವಿಸಿದೆ.
ಅನಧೀಕೃತವಾಗಿ ವಿದ್ಯುತ್ ಕಂಬದಿಂದ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ ಹೋಗಿ ಹುಡುಕಾಡಿದ್ದಾರೆ. ಆ ವೇಳೆ ಆ ವ್ಯಕ್ತಿಯ ಶವವಾಗಿ ದೊರೆತಿದ್ದು, ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ.

ಅಂದಹಾಗೆ, ಪಕ್ಕದ ಗದ್ದೆಯ ಮೋಹನ್ ಸಹದೇವಪ್ಪ ಪಾಟೀಲ್ ಎಂಬುವವರು, ತಮ್ಮ ಬೋರವೆಲ್ ಗೆ ವಿದ್ಯುತ್ ಸಂಪರ್ಕ ಕಲ್ಪಸಲಿಸಲು, ಮೃತ ವ್ಯಕ್ತಿಯ ಗದ್ದೆಯಲ್ಲಿರೋ ವಿದ್ಯುತ್ ಕಂಬದಿಂದ ಅನಧೀಕೃತವಾಗಿ ವೈಯರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದ ಎನ್ನಲಾಗಿದೆ. ಹಾಗೆ ಸಂಪರ್ಕ ಕಲ್ಪಿಸಿಕೊಂಡಿದ್ದ ವೈಯರ್ ತುಂಡಾಗಿದ್ದು, ಅದರಲ್ಲಿ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಮೃತ ಶಿವಪ್ಪ ನಾಗಪ್ಪ ವಡ್ಡರ ಆ ವೈಯರ್ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮುಂಡಗೋಡ ಕ್ರೈಂ ಪಿಎಸ್ಐ ಹನ್ಮಂತ್ ಗುಡುಗುಂಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮೋಹನ್ ಸಹದೇವಪ್ಪ ಪಾಟೀಲ್ ಅವರು ಮೇಲೆ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago