ಆನೇಕಲ್, ಜುಲೈ 16: ಗುತ್ತಿಗೆಗೆ ಜಮೀನು ನೀಡಲು ಒಪ್ಪದ ರೈತನ ವಿರುದ್ಧ ಪ್ರತೀಕಾರದ ಕ್ರಮವಾಗಿ ಗ್ರೀನ್ಹೌಸ್ ಧ್ವಂಸಗೊಳಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸಿಂಗಸಂದ್ರ ಗ್ರಾಮದಲ್ಲಿ ನಡೆದಿದೆ.
ಘಟನೆಯು ಸ್ಥಳೀಯ ರೈತ ಕಾರ್ತಿಕ್ ರೆಡ್ಡಿ ಅವರ ಮೇಲೆ ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ, ಕಾರ್ತಿಕ್ ರೆಡ್ಡಿ ಅವರು ಪ್ರಭಾವತಿ ಎಂಬುವರಿಂದ ಜಮೀನು ಖರೀದಿಸಿ ಅದರಲ್ಲಿ ಒಂದು ಎಕರೆ ಗಾತ್ರದ ಗ್ರೀನ್ಹೌಸ್ ನಿರ್ಮಿಸಿದ್ದರು. ಈ ಗ್ರೀನ್ಹೌಸ್ ಅನ್ನು ಆರೋಪಿಗಳಾದ ಹಾರಗದ್ದೆ ಅಣ್ಣಯಪ್ಪ, ಶ್ರೀಧರ್ ಮತ್ತು ಮುರಳಿ ಗುತ್ತಿಗೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಎಷ್ಟು ಬೇಕಾದರೂ ಕಡಿಮೆ ಬಿಲ್ಲು ನೀಡುವುದಾಗಿ ಹೇಳಿದ್ದಾರೆ.
ಆದರೆ, ಅಸಮಂಜಸ ಧರೆಯ ಕಾರಣದಿಂದ ಕಾರ್ತಿಕ್ ರೆಡ್ಡಿ ಈ ಗುತ್ತಿಗೆ ಅವಕಾಶವನ್ನು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿಗಳು ಜಮೀನನ್ನೇ ಮಾರಾಟ ಮಾಡುವಂತೆ ದಪ್ಪ ದಂಡೆ ಹಿಡಿದಂತೆ ಧಮ್ಕಿ ಹಾಕಿದ್ದಾರೆ. ಅಲ್ಲದೆ, ಸ್ಥಳೀಯ ರೌಡಿಶೀಟರ್ಗಳನ್ನು ಕರೆಸಿ ಹಲ್ಲೆ ಮಾಡಿಸುವ ಬೆದರಿಕೆ ನೀಡಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ.
ಹೆಚ್ಚು ಸಮಯದವಲ್ಲದೆ, ಒಂದು ವಾರದೊಳಗೆ ಆರೋಪಿಗಳು ಆ ಬೆದರಿಕೆಯನ್ನು ನಿಜಮಾಡಿದ್ದು, ರೌಡಿಗಳ ಸಹಾಯದಿಂದ ಕಾರ್ತಿಕ್ ರೆಡ್ಡಿಯವರ ಗ್ರೀನ್ಹೌಸ್ ಸಂಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಈ ವೇಳೆ ವಿಚಾರಣೆಗೆ ಹೋದ ಕಾರ್ತಿಕ್ ಕುಟುಂಬದ ಸದಸ್ಯರ ಮೇಲೂ ಹಲ್ಲೆ ನಡೆದಿದೆ.
ಈ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಬಗ್ಗೆ ಗಂಭೀರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ರೈತ ಕುಟುಂಬ ಪೊಲೀಸರು ಮತ್ತು ಸರ್ಕಾರವನ್ನು ಒತ್ತಾಯಿಸಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…