Categories: CorruptionLatest

ರೈತರ ಹಣ ಗುಳುಂ: ತೊಂಡೇಭಾವಿ ಹಾಲು ಡೇರಿಯಲ್ಲಿ ₹2.33 ಲಕ್ಷ ಹಣ ದುರುಪಯೋಗ.!

ಗೌರಿಬಿದನೂರು: ತೊಂಡೇಭಾವಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರೈತರ ಹಣ ದುರುಪಯೋಗವಾಗಿರುವ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಹಾಲು ಡೇರಿ ಆವರಣದಲ್ಲಿ ನಡೆದ ರೈತರ ಸಭೆಯಲ್ಲಿ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ರೈತರು ಆರೋಪಗಳ ಸುರಿಮಳೆಗೈದರು. ಡೇರಿಯಲ್ಲಿ ಕಳೆದ ಏಳು ವರ್ಷಗಳಿಂದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ರೆಡ್ಡಿ ಅವರು ರೈತರ ಗಮನಕ್ಕೆ ಬಾರದೆ ಡೇರಿಯ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ರೈತರ ಪ್ರಕಾರ, ಕಳೆದ ಐದು ತಿಂಗಳ ಅವಧಿಯಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ. ಈ ಕುರಿತು ಸೂಕ್ತ ತನಿಖೆ ನಡೆಸಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು. ಕಳೆದ ಐದು ತಿಂಗಳಲ್ಲಿ ಇಷ್ಟು ಪ್ರಮಾಣದ ಹಣ ದುರುಪಯೋಗವಾಗಿದ್ದರೆ, ಏಳು ವರ್ಷಗಳ ಅವಧಿಯಲ್ಲಿ ಎಷ್ಟು ಹಣ ದುರುಪಯೋಗವಾಗಿರಬಹುದು ಎಂಬ ಅನುಮಾನವನ್ನೂ ರೈತರು ವ್ಯಕ್ತಪಡಿಸಿದರು.

ಇದೇ ವೇಳೆ, ಡೇರಿಯಲ್ಲಿ ರೈತರ ಮಕ್ಕಳಿಗೆ ನೀಡಬೇಕಾದ ಪ್ರೋತ್ಸಾಹಧನವನ್ನು ಕೆಲವೇ ಸಮುದಾಯದವರಿಗೆ ಸೀಮಿತಗೊಳಿಸಲಾಗುತ್ತಿದೆ ಹಾಗೂ ಉದ್ಯೋಗ ನೇಮಕಾತಿಯಲ್ಲೂ ಒಂದೇ ಕುಟುಂಬದವರಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂತು. ಎಲ್ಲ ಸಮುದಾಯದ ಅರ್ಹ ಮಕ್ಕಳಿಗೂ ಪ್ರೋತ್ಸಾಹಧನ ನೀಡಬೇಕು ಹಾಗೂ ಉದ್ಯೋಗಾವಕಾಶಗಳಲ್ಲಿ ಸಮಾನತೆ ಇರಬೇಕು ಎಂದು ಗ್ರಾಮಸ್ಥ ಯತೀಶ್ ಒತ್ತಾಯಿಸಿದರು.

ಸಭೆಗೆ ಆಗಮಿಸಿದ ಕಾರ್ಯದರ್ಶಿ ಚಂದ್ರಶೇಖರ್ ರೆಡ್ಡಿ, ಕಳೆದ ಐದು ತಿಂಗಳ ಅವಧಿಯಲ್ಲಿ ₹2,33,696 ಹಣವನ್ನು ತಮ್ಮ ವೈಯಕ್ತಿಕ ಅಗತ್ಯಗಳಿಗೆ ಬಳಸಿಕೊಂಡಿರುವುದಾಗಿ ಒಪ್ಪಿಕೊಂಡರು. ಹಣವನ್ನು ಹಿಂತಿರುಗಿಸಲು ಕಾಲಾವಕಾಶ ನೀಡುವಂತೆ ಅವರು ಮನವಿ ಮಾಡಿದರು.

ಡೇರಿ ಅಧ್ಯಕ್ಷ ಹಾಗೂ ಚಿಮುಲ್ ನಿರ್ದೇಶಕ ಕಾಂತರಾಜು ಮಾತನಾಡಿ, ಕಾರ್ಯದರ್ಶಿ ಹಣ ದುರುಪಯೋಗ ಮಾಡಿಕೊಂಡಿರುವುದನ್ನು ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅವರು 15 ದಿನಗಳೊಳಗೆ ಸಂಪೂರ್ಣ ಹಣವನ್ನು ಡೇರಿಗೆ ಮರುಪಾವತಿಸಬೇಕು. ನಂತರ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ನರೇಂದ್ರ, ಸೂಪರ್‌ವೈಸರ್ ಮಂಜುನಾಥ್, ಡೇರಿ ನಿರ್ದೇಶಕರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಅಧಿಕಾರಿಗೆ ಚಪ್ಪಲಿ ಏಟು: 20 ವರ್ಷವಾದರೂ ಭೂ ಪರಿಹಾರ ನೀಡದ ಬಾಗಲಕೋಟೆ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ…

3 hours ago

ಸಾರ್ವಜನಿಕರ ದೂರುಗಳ ಬೆನ್ನಲ್ಲೇ ದಾಸನಪುರ ಗ್ರಾಮ ಪಂಚಾಯಿತಿ ಪಿಡಿಓ ಉಷಾ ಅಮಾನತು

ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…

3 hours ago

₹50 ಸಾವಿರ ಲಂಚ ಸ್ವೀಕರಿಸುವಾಗ ಪಿಎಸ್‌ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

ಕಲಬುರಗಿ: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಕಲಬುರಗಿ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್…

3 hours ago

4ನೇ ತರಗತಿ ಓದಿದ ಮೆಕ್ಯಾನಿಕ್‌ನ ಅದ್ಭುತ ಸಾಧನೆ: ಮಾರುತಿ 800 ಅನ್ನು ಲ್ಯಾಂಬೋರ್ಗಿನಿಯನ್ನಾಗಿ ಮಾಡಿದ ಕನ್ನಡಿಗ!

ಈ ಕಾಲದಲ್ಲಿ ಪ್ರತಿಭೆ ಮತ್ತು ಕ್ರಿಯೇಟಿವಿಟಿಗೆ ಯಾವುದೇ ವಿದ್ಯಾರ್ಹತೆ ಅಥವಾ ದೊಡ್ಡ ಹುದ್ದೆಗಳ ಅಗತ್ಯವಿಲ್ಲ ಎಂಬುದನ್ನು ಹಾಸನ ಜಿಲ್ಲೆಯ ಅರಸೀಕೆರೆಯ…

4 hours ago

ರಾಜ್ಯ ಸರ್ಕಾರದಿಂದ ಭರ್ಜರಿ ಐಎಎಸ್‌ ಸರ್ಜರಿ: 14 ಹಿರಿಯ ಅಧಿಕಾರಿಗಳ ವರ್ಗಾವಣೆ, ಹಲವರಿಗೆ ಹೊಸ ಜವಾಬ್ದಾರಿ

ಬೆಂಗಳೂರು, ಜೂನ್ 18: ರಾಜ್ಯ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆ…

4 hours ago

ಮುಸ್ಲಿಂ ಯುವಕ- ಹಿಂದೂ ಯುವತಿ ಪ್ರಕರಣಕ್ಕೆ ಹೊಸ ತಿರುವು: ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರ ಪ್ರತಿಭಟನೆ.

ಭಟ್ಕಳ: ಕೆಲ ದಿನಗಳಿಂದ ಶಾಂತವಾಗಿದ್ದ ಕರಾವಳಿ ನಗರ ಭಟ್ಕಳದಲ್ಲಿ ಮತ್ತೊಮ್ಮೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮುಸ್ಲಿಂ ಯುವಕ ಹಾಗೂ ಹಿಂದೂ…

4 hours ago