ಶಿವಮೊಗ್ಗ: ಸಾಗರ ತಾಲೂಕಿನ ಉಳ್ಳೂರುದಿಂದ ತ್ಯಾಗರ್ತಿವರೆಗೆ ನಿರ್ಮಾಣಗೊಳ್ಳುತ್ತಿರುವ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿರುವ ರೈತರು ಮತ್ತು ಸಾರ್ವಜನಿಕರು, ಸರ್ಕಾರ ಈಗಾಗಲೇ ನಿಗದಿಪಡಿಸಿರುವ ಮಾರ್ಗದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ 33 ವಿದ್ಯುತ್ ಗೋಪುರಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ರೈತರು ಯಾವುದೇ ತಕರಾರು ಇಲ್ಲದೆ ತಮ್ಮ ಭೂಮಿಯನ್ನು ಒದಗಿಸಿದ್ದಾರೆ. ಇನ್ನೂ 10 ರಿಂದ 14 ಗೋಪುರಗಳ ನಿರ್ಮಾಣ ಬಾಕಿಯಿದ್ದು, ಕೆಲವು ರೈತರ ವಿರೋಧದಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಆರೋಪಿಸಲಾಗಿದೆ.
ಈ ವಿಚಾರವು ನ್ಯಾಯಾಲಯದ ಮೆಟ್ಟಿಲೇರಿದ್ದು, ಜಿಲ್ಲಾಧಿಕಾರಿಗಳು 176 ರೈತರಿಗೆ ನೋಟಿಸ್ ನೀಡಿ, ಕಾಮಗಾರಿಗೆ ಅಡ್ಡಿಪಡಿಸಬಾರದು ಹಾಗೂ ಪೂರ್ವನಿರ್ಧರಿತ ಮಾರ್ಗದಲ್ಲಿಯೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ರೈತರು ಕಾಮಗಾರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಸುಮಾರು 150 ರೈತರು ಯೋಜನೆಗೆ ಒಪ್ಪಿಗೆ ಸೂಚಿಸಿ ತಮ್ಮ ಭೂಮಿಯನ್ನು ಬಿಟ್ಟುಕೊಟ್ಟಿದ್ದಾರೆ. ಒಟ್ಟು 60 ರಿಂದ 70 ರೈತರು ಯಾವುದೇ ತೊಂದರೆ ನೀಡದೆ ಸಹಕರಿಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ವಿದ್ಯುತ್ ಲೈನ್ ಮಾರ್ಗವನ್ನು ಬದಲಾಯಿಸಬಾರದು. ಸರ್ಕಾರ ಈಗಾಗಲೇ ನಿಗದಿಪಡಿಸಿರುವ ಸ್ಥಳದಲ್ಲಿಯೇ ಕಾಮಗಾರಿ ಪೂರ್ಣಗೊಳ್ಳಬೇಕು. ಮಾರ್ಗ ಬದಲಾವಣೆ ಯತ್ನ ನಡೆದರೆ ದೊಡ್ಡ ಮಟ್ಟದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾಮಗಾರಿಯನ್ನು ಯಾವುದೇ ಒತ್ತಡಕ್ಕೆ ಮಣಿಯದೆ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಕುಮಾರಸ್ವಾಮಿ ಗೌಡ (ಕೊಪ್ಪ), ಸೋಮಶೇಖರ ಹುತ್ತದಿಂಬ, ಕುಮಾರ್ ಕಾಗೋಡುದಿಂಬ, ಗಣೇಶ್ ಕಾಗೋಡುದಿಂಬ, ಸತ್ಯನಾರಾಯಣ ಕಾಗೋಡುದಿಂಬ, ಬೀರಪ್ಪ ಮಳ್ಳ, ರೇಣುಕಮ್ಮ ಮಳ್ಳ, ಸಾವಿತ್ರಮ್ಮ ಮಳ್ಳ, ಹಮೀದ್ ಖಾನ್ (ತ್ಯಾಗರ್ತಿ), ಲಿಂಗರಾಜು (ತ್ಯಾಗರ್ತಿ), ಪರಶುರಾಮ ಜಂಬಾನಿ, ರಾಮಪ್ಪ ಬರೂರು, ಟಾಕಪ್ಪ ಕುಂದೂರು ಸೇರಿದಂತೆ ಹಲವರು ಭಾಗವಹಿಸಿದ್ದರು.
ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 1290…
ಸಿದ್ದಾಪುರ: ತಾಲೂಕಿನ ಕಾನಸೂರಿನ ಗಟ್ಟಿಕೈ ಕ್ರಾಸ್ ಬಳಿ, ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ…
ಮುಂಡಗೋಡ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಕುಖ್ಯಾತ ರೌಡಿ ಆಸಾಮಿಗಳ…
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತವು ಯೂರಿಯಾ ರಸಗೊಬ್ಬರವನ್ನು ವಿತರಿಸುವಾಗ…
ಭಟ್ಕಳ: ಅಕ್ರಮ ಗಾಂಜಾ ಮಾರಾಟ ಜಾಲದ ವಿರುದ್ಧ ಭಟ್ಕಳ ಶಹರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಯುವಕನೊಬ್ಬನನ್ನು ಬಂಧಿಸಿ, ಗಾಂಜಾ ಹಾಗೂ…
ಭಟ್ಕಳ ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಹೊಳೆ ಪ್ರದೇಶದಲ್ಲಿ ಪರಿಸರ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ…