Categories: Latest

ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತ ಸಮೂಹ,ಕಡಿಮೆ ಪ್ರಮಾಣದಲ್ಲಿ ಬಿದ್ದ ಮುಂಗಾರು ಮಳೆ; ಬಿತ್ತನೆ ಕಾರ್ಯ ಚುರುಕು.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತವು ಯೂರಿಯಾ ರಸಗೊಬ್ಬರವನ್ನು ವಿತರಿಸುವಾಗ ಸಂಬಂಧಪಡುವ ಎಲ್ಲಾ ಗ್ರಾಮಗಳ ರೈತರು ಏಕಕಾಲಕ್ಕೆ ಮುಗಿಬಿದ್ದ ಕಾರಣದಿಂದಾಗಿ ಕೆಲ ಕಾಲ ಪರದಾಡುವಂತಾಯಿತು.

ಈ ಭಾಗದಲ್ಲಿ ಕಡಿಮೆ ಪ್ರಮಾಣ ಮಳೆಯಾಗಿದ್ದರೂ ಬೀಜ, ಗೊಬ್ಬರದ ಅಭಾವದಿಂದಾಗಿ ಬಿತ್ತನೆ ಕಾರ್ಯ ವಿಳಂಬವಾಗುತ್ತಿದೆ. ರೈತರು ರಸಗೊಬ್ಬರಕ್ಕಾಗಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಸರ್ಕಾರವು ಎಫ್‌ಐಡಿ (FID) ಕಡ್ಡಾಯಗೊಳಿಸಿರುವುದರಿಂದ ಮತ್ತು ನಿಗದಿತ ಪ್ರಮಾಣದಲ್ಲಿ ಮಾತ್ರ ಗೊಬ್ಬರ ಸಿಗುತ್ತಿರುವುದರಿಂದ ರೈತರಿಗೆ ಅನಾನುಕೂಲವಾಗುತ್ತಿದೆ. ಕೃಷಿ ಇಲಾಖೆಯು ಕೂಡಲೇ ಕಾರ್ಯಪ್ರವೃತ್ತಗೊಂಡು ನಿಗದಿತ ಅವಧಿಯಲ್ಲಿ ಬೀಜ, ರಸಗೊಬ್ಬರವನ್ನು ಸರಬರಾಜು ಮಾಡಲು ಅನುವು ಮಾಡಿಕೊಡಬೇಕೆಂದು ಪ್ರಗತಿ ಪರ ರೈತರು ಅಭಿಪ್ರಾಯಪಟ್ಟರು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಆರೋಗ್ಯ ಇಲಾಖೆಯಲ್ಲಿ 1290 ವೈದ್ಯರ ನೇಮಕಾತಿಗೆ ಸರ್ಕಾರದ ನಿರ್ಧಾರ; 5 ವರ್ಷ ಸೇವೆಯ ಬಳಿಕ ಕಾಯಂ ಹುದ್ದೆಗೆ ಅವಕಾಶ

ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 1290…

14 hours ago

ವಿದ್ಯಾರ್ಥಿಯ ಸಾವಿನ ಬಗ್ಗೆ ಅನುಮಾನ: ಸಿಸಿಟಿವಿ ದೃಶ್ಯಾವಳಿ ಬಹಿರಂಗಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಸಿದ್ದಾಪುರ: ತಾಲೂಕಿನ ಕಾನಸೂರಿನ ಗಟ್ಟಿಕೈ ಕ್ರಾಸ್ ಬಳಿ, ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ…

14 hours ago

ಮುಂಡಗೋಡಿನ ಇಬ್ಬರು ಕುಖ್ಯಾತ ರೌಡಿ ಶೀಟರ್‌ಗಳು ಗೂಂಡಾ ಕಾಯ್ದೆಯಡಿ ಬಂಧನ; ಬಳ್ಳಾರಿ ಕಾರಾಗೃಹಕ್ಕೆ ರವಾನೆ

ಮುಂಡಗೋಡ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಕುಖ್ಯಾತ ರೌಡಿ ಆಸಾಮಿಗಳ…

15 hours ago

ಭಟ್ಕಳದಲ್ಲಿ ಗಾಂಜಾ ಜಾಲಕ್ಕೆ ಪೊಲೀಸ್ ಬ್ರೇಕ್: ಕಾರು ಸಮೇತ ಯುವಕ ಅರೆಸ್ಟ್

ಭಟ್ಕಳ: ಅಕ್ರಮ ಗಾಂಜಾ ಮಾರಾಟ ಜಾಲದ ವಿರುದ್ಧ ಭಟ್ಕಳ ಶಹರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಯುವಕನೊಬ್ಬನನ್ನು ಬಂಧಿಸಿ, ಗಾಂಜಾ ಹಾಗೂ…

2 days ago

ರೆಸಾರ್ಟ್ ನಿರ್ಮಾಣಕ್ಕೆ ಹೊಳೆ ಪ್ರದೇಶ ಹಾನಿ?: ಸ್ಥಳೀಯರಿಂದ ಸಮಗ್ರ ತನಿಖೆಗೆ ಒತ್ತಾಯ

ಭಟ್ಕಳ ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಹೊಳೆ ಪ್ರದೇಶದಲ್ಲಿ ಪರಿಸರ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ…

2 days ago

110 ಕೆವಿ ಲೈನ್ ಕಾಮಗಾರಿ ವಿಳಂಬಕ್ಕೆ ರೈತರ ಆಕ್ರೋಶ, ಶೀಘ್ರ ಅನುಷ್ಠಾನಕ್ಕೆ ಒತ್ತಾಯ

ಶಿವಮೊಗ್ಗ: ಸಾಗರ ತಾಲೂಕಿನ ಉಳ್ಳೂರುದಿಂದ ತ್ಯಾಗರ್ತಿವರೆಗೆ ನಿರ್ಮಾಣಗೊಳ್ಳುತ್ತಿರುವ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿರುವ ರೈತರು ಮತ್ತು…

2 days ago