ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾರ್ ಒಳಗೆ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪಟ್ಟಿ:
ಬಂಧಿತ ಆರೋಪಿಗಳನ್ನು ಗಿರೀಶ್, ಭರತ್ ಮತ್ತು ಮೋಹನ್ ಎಂದು ಗುರುತಿಸಲಾಗಿದೆ. ಈ ಮೂವರು ಮತ್ತು ಹಲ್ಲೆಗೊಳಗಾದ ವಂಶಿ ಹಾಗೂ ಪವನ್ ಪರಸ್ಪರ ಪರಿಚಿತರಾಗಿದ್ದರು.
ಘಟನೆ ಹಿನ್ನೆಲೆ:
ಮುನ್ಸೂಚನೆಯಂತೆ, ಹಲ್ಲೆಗೆ ಕಾರಣವಾಗಿದ್ದು ಮೊದಲು ನಡೆದ ವಿವಾದ. ಹಲ್ಲೆಗೊಳಗಾದ ವಂಶಿ ಮತ್ತು ಪವನ್, ಮೊದಲು ಮೋಹನ್ ಗೆ ಕರೆ ಮಾಡಿ ಅವಾಜ್ ಹಾಕಿದ್ದರೆಂದು ವರದಿ ಇದೆ. ಮೊದಲು ದಾಖಲಾಗಿದ್ದ ದೂರು ಸಂಬಂಧ, “ಧೈರ್ಯ ಇದ್ದರೆ ನಮ್ಮನ್ನು ಎದುರಿಸು” ಎಂದು ವಂಶಿ & ಪವನ್ ಮೋಹನ್ ಗೆ ಪ್ರಚೋದನೆ ನೀಡಿದರೆಂದು ಹೇಳಲಾಗಿದೆ.
ಹಲ್ಲೆ ಮತ್ತು ಪೊಲೀಸರು ಕೈಗೊಂಡ ಕ್ರಮ:
ಈ ಘಟನೆಯಿಂದ ಕೋಪಗೊಂಡ ಮೋಹನ್, ಸಹಚರರಾದ ಗಿರೀಶ್ ಮತ್ತು ಭರತ್ ಅವರನ್ನು ಕರೆದುಕೊಂಡು ಬಾರ್ ಗೆ ತೆರಳಿ, ವಂಶಿ ಮತ್ತು ಪವನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ವಿಚಾರ ತಿಳಿದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…