Categories: CrimeLatest

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು ಗ್ರಾಮದ ಬಳಿ ಸಂಭವಿಸಿದೆ. ಈ ಘಟನೆ ವಿಟ್ಟೋಸ್ ಬಾರ್ ಸಮೀಪ, ಎಸ್‌ಎಚ್-9 ಹೆದ್ದಾರಿಯ ಬಳಿ ನಡೆದಿದೆ.

ಕುಟುಂಬದ ಮಾಹಿತಿ ಪ್ರಕಾರ, ಚಂದನದೂರು ಗ್ರಾಮದ ಬಳಿ ಸಂಬಂಧಿಕರಿಗೆ ಅಪಘಾತ ಸಂಭವಿಸಿದೆ ಎಂಬ ಸುದ್ದಿ ತಿಳಿದ ಉಮಾದೇವಿ ಅವರು ತಮ್ಮ ಪುತ್ರ ಸಂಜಯ್ (21) ಜೊತೆ ದ್ವಿಚಕ್ರ ವಾಹನದಲ್ಲಿ ಅವರನ್ನು ನೋಡಲು ತೆರಳುತ್ತಿದ್ದರು. ಈ ವೇಳೆ ಸಂಜಯ್ ಚಾಲನೆ ಮಾಡುತ್ತಿದ್ದ ವಾಹನಕ್ಕೆ ಪಕ್ಕದಲ್ಲೇ ಸಾಗುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನ ಸವಾರ ಯಾವುದೇ ಸೂಚನೆ ನೀಡದೇ ಏಕಾಏಕಿ ಎಡಕ್ಕೆ ತಿರುಗಿದ ಪರಿಣಾಮ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಉಮಾದೇವಿ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ದೇಹದ ಹಲವೆಡೆ ಗಾಯಗಳಾಗಿದ್ದವು. ಸಂಜಯ್ ಅವರಿಗೆ ಕೈ ಮತ್ತು ಕಾಲುಗಳಲ್ಲಿ ಗಾಯಗಳಾಗಿವೆ.

ಆಂಬುಲೆನ್ಸ್ ತಡವಾದ ಕಾರಣ ಸ್ಥಳೀಯರು ಗಾಯಾಳುಗಳನ್ನು ಆಟೋ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಮಧ್ಯದಲ್ಲೇ ಆಂಬುಲೆನ್ಸ್ ಸಿಕ್ಕಿದ ಹಿನ್ನೆಲೆಯಲ್ಲಿ ಅವರನ್ನು ಅದರಲ್ಲಿ ಸ್ಥಳಾಂತರಿಸಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಪರಿಶೀಲಿಸಿದಾಗ ಉಮಾದೇವಿ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಸಂಜಯ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಈ ಅಪಘಾತಕ್ಕೆ ಕಾರಣವಾದ ಇನ್ನೊಂದು ದ್ವಿಚಕ್ರ ವಾಹನ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago