ವಾಯವ್ಯ ದೆಹಲಿಯ ಪ್ರೇಮ್ ನಗರದಲ್ಲಿ 26ರ ಹರೆಯದ ಯುವತಿಗೆ ಕೆಲಸ ಕೊಡಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಆಕೆಯ ಮಾವ ಪದೇ ಪದೇ ಇಟ್ಟಿಗೆಯಿಂದ ಆಕೆಯ ತಲೆಗೆ ಹೊಡೆದು ಹಲ್ಲೆ ಮಾಡಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಕೆಲಸ ಮಾಡಲು ಬಯಸಿದ್ದರು. ಆದರೆ ಆಕೆಯ ಗಂಡನ ಕುಟುಂಬಸ್ಥರು ಅದನ್ನು ವಿರೋಧಿಸಿದ್ದರು ಎಂದು ಪೊಲೀಸರು ಸೇರಿಸಿದ್ದಾರೆ.
ಬುಧವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ಮತ್ತು ಆಕೆಯ ಮಾವ ಜಗಳವಾಡುತ್ತಿರುವುದು ಕಂಡು ಬಂದಿದೆ. ಆತ ಯುವತಿಯನ್ನು ಇಟ್ಟಿಗೆಯಿಂದ ಹೊಡೆಯುವುದಾಗಿ ಬೆದರಿಸುತ್ತಾನೆ. ಆಗ ಮಹಿಳೆ ಹೊರಹೋಗಲು ಪ್ರಯತ್ನಿಸಿದ್ದಾರೆ. ಈ ಸಂದರ್ಭ ಮಾವ, ಯುವತಿಯ ತಲೆಗೆ ಎರಡು ಬಾರಿ ಹೊಡೆದಿದ್ದಾನೆ. ಈ ವಿಡಿಯೋ ಆಧಾರದ ಮೇಲೆ ಆರೋಪಿಯನ್ನು ಗುರುತಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾವನಿಂದಲೇ ಹಲ್ಲೆಗೊಳಗಾದ ಯುವತಿಯನ್ನು ಸ್ಥಳೀಯರು ಮಧ್ಯಪ್ರವೇಶಿಸಿ ರಕ್ಷಿಸಿ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಆಕೆಯ ತಲೆಗೆ ಹತ್ತಕ್ಕೂ ಹೆಚ್ಚು ಹೊಲಿಗೆಗಳನ್ನು ಹಾಕಲಾಗಿವೆ. ‘ಯುವತಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಸ್ಥಿರವಾಗಿದ್ದಾಳೆ. ಅವರು ಸದ್ಯಕ್ಕೆ ಹೇಳಿಕೆ ನೀಡುವುದಿಲ್ಲ. ಉದ್ಯೋಗ ಸಂದರ್ಶನಕ್ಕೆ ಹೋಗುತ್ತಿದ್ದ ಕಾರಣಕ್ಕೆ ಮಾವ ಆಕೆಯನ್ನು ಥಳಿಸಿದ್ದಾರೆ ಎಂದು ಆರೋಪಿಸಿದ್ದ ಆಕೆಯ ಪೋಷಕರೊಂದಿಗೆ ಮಾತನಾಡಿದೆವು. ಆಕೆ ಕೆಲಸ ಮಾಡಿ ತನ್ನ ಕುಟುಂಬವನ್ನು ಆರ್ಥಿಕವಾಗಿ ಬೆಂಬಲಿಸಲು ಬಯಸಿದ್ದಳು ‘ಎಂದು ಪೊಲೀಸರು ಹೇಳಿದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…