Latest

ದುಡಿಯಬೇಕು ಎನ್ನುತ್ತಿದ್ದ ಸೊಸೆಗೆ ಇಟ್ಟಿಗೆಯಿಂದ ಹೊಡೆದ ಮಾವ!

ವಾಯವ್ಯ ದೆಹಲಿಯ ಪ್ರೇಮ್ ನಗರದಲ್ಲಿ 26ರ ಹರೆಯದ ಯುವತಿಗೆ ಕೆಲಸ ಕೊಡಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಆಕೆಯ ಮಾವ ಪದೇ ಪದೇ ಇಟ್ಟಿಗೆಯಿಂದ ಆಕೆಯ ತಲೆಗೆ ಹೊಡೆದು ಹಲ್ಲೆ ಮಾಡಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಕೆಲಸ ಮಾಡಲು ಬಯಸಿದ್ದರು. ಆದರೆ ಆಕೆಯ ಗಂಡನ ಕುಟುಂಬಸ್ಥರು ಅದನ್ನು ವಿರೋಧಿಸಿದ್ದರು ಎಂದು ಪೊಲೀಸರು ಸೇರಿಸಿದ್ದಾರೆ.
ಬುಧವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ಮತ್ತು ಆಕೆಯ ಮಾವ ಜಗಳವಾಡುತ್ತಿರುವುದು ಕಂಡು ಬಂದಿದೆ. ಆತ ಯುವತಿಯನ್ನು ಇಟ್ಟಿಗೆಯಿಂದ ಹೊಡೆಯುವುದಾಗಿ ಬೆದರಿಸುತ್ತಾನೆ. ಆಗ ಮಹಿಳೆ ಹೊರಹೋಗಲು ಪ್ರಯತ್ನಿಸಿದ್ದಾರೆ. ಈ ಸಂದರ್ಭ ಮಾವ, ಯುವತಿಯ ತಲೆಗೆ ಎರಡು ಬಾರಿ ಹೊಡೆದಿದ್ದಾನೆ. ಈ ವಿಡಿಯೋ ಆಧಾರದ ಮೇಲೆ ಆರೋಪಿಯನ್ನು ಗುರುತಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾವನಿಂದಲೇ ಹಲ್ಲೆಗೊಳಗಾದ ಯುವತಿಯನ್ನು ಸ್ಥಳೀಯರು ಮಧ್ಯಪ್ರವೇಶಿಸಿ ರಕ್ಷಿಸಿ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಆಕೆಯ ತಲೆಗೆ ಹತ್ತಕ್ಕೂ ಹೆಚ್ಚು ಹೊಲಿಗೆಗಳನ್ನು ಹಾಕಲಾಗಿವೆ. ‘ಯುವತಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಸ್ಥಿರವಾಗಿದ್ದಾಳೆ. ಅವರು ಸದ್ಯಕ್ಕೆ ಹೇಳಿಕೆ ನೀಡುವುದಿಲ್ಲ. ಉದ್ಯೋಗ ಸಂದರ್ಶನಕ್ಕೆ ಹೋಗುತ್ತಿದ್ದ ಕಾರಣಕ್ಕೆ ಮಾವ ಆಕೆಯನ್ನು ಥಳಿಸಿದ್ದಾರೆ ಎಂದು ಆರೋಪಿಸಿದ್ದ ಆಕೆಯ ಪೋಷಕರೊಂದಿಗೆ ಮಾತನಾಡಿದೆವು. ಆಕೆ ಕೆಲಸ ಮಾಡಿ ತನ್ನ ಕುಟುಂಬವನ್ನು ಆರ್ಥಿಕವಾಗಿ ಬೆಂಬಲಿಸಲು ಬಯಸಿದ್ದಳು ‘ಎಂದು ಪೊಲೀಸರು ಹೇಳಿದರು.

ಭ್ರಷ್ಟರ ಬೇಟೆ

Recent Posts

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

42 minutes ago

ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ಮೌಲ್ಯದ ಐಷಾರಾಮಿ ಕಾರು: ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…

47 minutes ago

ಪತಿಯ ಅಕ್ರಮ ಸಂಬಂಧದ ರಹಸ್ಯ ಬಯಲು ಮಾಡಲು ಸಾಕ್ಷ್ಯ ಸಂಗ್ರಹಿಸಿದ್ದ ಪತ್ನಿ ನಿಗೂಢ ಸಾವು: ಕೊಲೆ ಶಂಕೆ!

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್‌ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…

59 minutes ago

ನಾಳೆ 2ನೇ ಮದುವೆಯಾಗಬೇಕಿದ್ದ ಶಿರಸಿ ಆಯುರ್ವೇದ ವೈದ್ಯರ ಕ್ರೂರ ಹತ್ಯೆ..!

ಶಿರಸಿ: ನಗರದ ಕೆಎಚ್‌ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…

12 hours ago

ಭಟ್ಕಳದಲ್ಲಿ ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಅನುಮಾನಾಸ್ಪದ ಸಾವು

ಭಟ್ಕಳ: ಮುರುಡೇಶ್ವರ ಸಮೀಪದ ಮುಡಶಿರಾಲಿ ಗ್ರಾಮದ 42 ವರ್ಷದ ಮಾಲತಿ ನಾಗರಾಜ ನಾಯ್ಕ ಅವರು ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುವ…

16 hours ago

ಪ್ರೀತಿ ಹೆಸರಿನಲ್ಲಿ ಕಿರುಕುಳ: ಯುವತಿ-ಪೋಷಕರಿಂದ ಯುವಕನಿಗೆ ಸಾರ್ವಜನಿಕವಾಗಿ ಚಪ್ಪಲಿ ಸೇವೆ..!

ಹುಬ್ಬಳ್ಳಿ: ಪ್ರೀತಿ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಯುವತಿ ಮತ್ತು ಆಕೆಯ ಪೋಷಕರು ಸಾರ್ವಜನಿಕರ ಮುಂದೆ ಚಪ್ಪಲಿಯಿಂದ…

16 hours ago