ರಾಜಸ್ಥಾನದ ಬುಂದಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಸೊಸೆಯನ್ನು ಪ್ರೀತಿಸಿ ಆಕೆಯೊಂದಿಗೆ ಓಡಿಹೋಗಿದ್ದಾನೆ. ಬುಂದಿ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಲೋರ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.
ತಂದೆ, ಪತ್ನಿಯೊಂದಿಗೆ ಓಡಿ ಹೋಗಿರುವ ವಿಷಯ ತಿಳಿದ ಮಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ತಮ್ಮ ತಂದೆ ಓಡಿಹೋಗುವ ಮುನ್ನ ಬೈಕ್ ಕದ್ದಿದ್ದಾರೆ ಎಂದು ಆರೋಪಿಸಿದ್ದಾನೆ.
ಸಂತ್ರಸ್ತನನ್ನು ಪವನ್ ವೈರಾಗಿ ಎಂದು ಗುರುತಿಸಲಾಗಿದ್ದು, ತನ್ನ ತಂದೆ ರಮೇಶ್ ವೈರಾಗಿ ತನ್ನ ಪತ್ನಿಯೊಂದಿಗೆ ಓಡಿ ಹೋಗಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾನೆ. ತಂದೆ ಹೆಂಡತಿಯನ್ನು ತನ್ನಿಂದ ದೂರ ಮಾಡಿದ್ದಾನೆ ಎಂದು ಪವನ್ ಆರೋಪಿಸಿದ್ದಾನೆ.
ಪವನ್ ಅವರಿಗೆ ಆರು ತಿಂಗಳ ಮಗಳಿದ್ದಾಳೆ. ಈ ಹಿಂದೆಯೂ ತನ್ನ ತಂದೆ ರಮೇಶ್ ಅಕ್ರಮ ಎಸಗುತ್ತಿದ್ದರು ಎಂದು ಆರೋಪಿಸಿದ್ದಾನೆ. ಪವನ್ ಪ್ರಕಾರ ಅವನ ತಂದೆ ತನ್ನ ಬೈಕನ್ನು ಕದ್ದು ಹೆಂಡತಿಯೊಂದಿಗೆ ಓಡಿಹೋಗಿದ್ದಾರೆ. ಅಲ್ಲದೇ ಪತ್ನಿ ಅಮಾಯಕಿಯಾಗಿದ್ದು ಆಕೆ ತಂದೆಯಿಂದ ಮೋಸ ಹೋಗಿದ್ದಾಳೆ ಎಂದು ಹೇಳಿದ್ದಾನೆ.
ದೂರು ದಾಖಲಿಸಿದ ನಂತರ, ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪವನ್ ಆರೋಪಿಸಿದ್ದಾನೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…