ರಾಜಸ್ಥಾನದ ಬುಂದಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಸೊಸೆಯನ್ನು ಪ್ರೀತಿಸಿ ಆಕೆಯೊಂದಿಗೆ ಓಡಿಹೋಗಿದ್ದಾನೆ. ಬುಂದಿ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಲೋರ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.
ತಂದೆ, ಪತ್ನಿಯೊಂದಿಗೆ ಓಡಿ ಹೋಗಿರುವ ವಿಷಯ ತಿಳಿದ ಮಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ತಮ್ಮ ತಂದೆ ಓಡಿಹೋಗುವ ಮುನ್ನ ಬೈಕ್ ಕದ್ದಿದ್ದಾರೆ ಎಂದು ಆರೋಪಿಸಿದ್ದಾನೆ.
ಸಂತ್ರಸ್ತನನ್ನು ಪವನ್ ವೈರಾಗಿ ಎಂದು ಗುರುತಿಸಲಾಗಿದ್ದು, ತನ್ನ ತಂದೆ ರಮೇಶ್ ವೈರಾಗಿ ತನ್ನ ಪತ್ನಿಯೊಂದಿಗೆ ಓಡಿ ಹೋಗಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾನೆ. ತಂದೆ ಹೆಂಡತಿಯನ್ನು ತನ್ನಿಂದ ದೂರ ಮಾಡಿದ್ದಾನೆ ಎಂದು ಪವನ್ ಆರೋಪಿಸಿದ್ದಾನೆ.
ಪವನ್ ಅವರಿಗೆ ಆರು ತಿಂಗಳ ಮಗಳಿದ್ದಾಳೆ. ಈ ಹಿಂದೆಯೂ ತನ್ನ ತಂದೆ ರಮೇಶ್ ಅಕ್ರಮ ಎಸಗುತ್ತಿದ್ದರು ಎಂದು ಆರೋಪಿಸಿದ್ದಾನೆ. ಪವನ್ ಪ್ರಕಾರ ಅವನ ತಂದೆ ತನ್ನ ಬೈಕನ್ನು ಕದ್ದು ಹೆಂಡತಿಯೊಂದಿಗೆ ಓಡಿಹೋಗಿದ್ದಾರೆ. ಅಲ್ಲದೇ ಪತ್ನಿ ಅಮಾಯಕಿಯಾಗಿದ್ದು ಆಕೆ ತಂದೆಯಿಂದ ಮೋಸ ಹೋಗಿದ್ದಾಳೆ ಎಂದು ಹೇಳಿದ್ದಾನೆ.
ದೂರು ದಾಖಲಿಸಿದ ನಂತರ, ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪವನ್ ಆರೋಪಿಸಿದ್ದಾನೆ.
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…