Categories: CrimeLatest

8 ಸಾವಿರ ರೂ. ಬಾಡಿಗೆಗಾಗಿ ಪತ್ನಿ-ಮಗಳನ್ನೇ ನರಕಕ್ಕೆ ತಳ್ಳಿದ ತಂದೆ! ಗುಜರಾತ್‌ನಲ್ಲಿ ಅಮಾನವೀಯ ಕೃತ್ಯ

ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ನಾಚಿಸುವಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕೇವಲ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗದ ಕಾರಣ, ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಮನೆ ಮಾಲೀಕನಿಂದಲೇ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಯಲು ಅವಕಾಶ ನೀಡಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಮೂಲತಃ ಸುರೇಂದ್ರನಗರ ಮೂಲದ ಈ ಕುಟುಂಬವು ಜೀವನೋಪಾಯದ ಹುಡುಕಾಟದಲ್ಲಿ ಸುಮಾರು ಆರು ತಿಂಗಳ ಹಿಂದೆ ಮೋರ್ಬಿಗೆ ಬಂದಿತ್ತು. ಇಲ್ಲಿ ತಿಂಗಳಿಗೆ 2 ಸಾವಿರ ರೂ. ಬಾಡಿಗೆಯ ಮನೆಯಲ್ಲಿ ವಾಸವಿದ್ದ ಅವರು, ತೀವ್ರ ಆರ್ಥಿಕ ಸಂಕಷ್ಟದಿಂದ ನಾಲ್ಕು ತಿಂಗಳ ಬಾಡಿಗೆಯನ್ನು ಪಾವತಿಸಲು ವಿಫಲರಾಗಿದ್ದರು.

ಈ ಹಿನ್ನೆಲೆ ಮನೆ ಮಾಲೀಕ ಬಾಕಿ ಬಾಡಿಗೆಗಾಗಿ ಒತ್ತಡ ಹೇರುತ್ತಿದ್ದನು ಎನ್ನಲಾಗಿದೆ. ಕೊನೆಗೆ ಅಮಾನವೀಯ ನಿರ್ಧಾರ ಕೈಗೊಂಡ ತಂದೆ, ಬಾಡಿಗೆ ಹಣದ ಬದಲಿಗೆ ತನ್ನ ಪತ್ನಿ ಮತ್ತು ಅಪ್ರಾಪ್ತ ಮಗಳನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮನೆ ಮಾಲೀಕನಿಗೆ ಅವಕಾಶ ನೀಡಿದ್ದಾನೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಮನೆ ಮಾಲೀಕ ಕೂಡ ಈ ಕ್ರೌರ್ಯಕ್ಕೆ ಕೈಜೋಡಿಸಿ, ತಾಯಿ ಮತ್ತು ಮಗಳ ಮೇಲೆ ನಿರಂತರ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ದುಷ್ಕೃತ್ಯದ ವಿಚಾರ ಕುಟುಂಬದ ಮಹಿಳೆಯೊಬ್ಬರಿಗೆ ತಿಳಿದ ನಂತರ ಅವರು ಮೋರ್ಬಿ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರು ಆಧರಿಸಿ ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡು, ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೊ ಕಾಯ್ದೆ ಸೇರಿದಂತೆ ವಿವಿಧ ಗಂಭೀರ ಆರೋಪಗಳಡಿ ತಂದೆ ಮತ್ತು ಮನೆ ಮಾಲೀಕನನ್ನು ಬಂಧಿಸಿದ್ದಾರೆ.

“ಅಪ್ರಾಪ್ತ ಬಾಲಕಿಯ ತಂದೆ ಹಾಗೂ ಮನೆ ಮಾಲೀಕರು ಸೇರಿ ಈ ಕೃತ್ಯ ನಡೆಸಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ಮುಂದುವರಿದಿದೆ,” ಎಂದು ಮೋರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಎಂ. ಲಾಲ್ ತಿಳಿಸಿದ್ದಾರೆ. ಪ್ರಕರಣದಲ್ಲಿ ಇನ್ನೊಬ್ಬ ವ್ಯಕ್ತಿಯೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಘಟನೆ ಬಹಿರಂಗವಾದ ತಕ್ಷಣ ಸಾಮಾಜಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ತಾಯಿ ಮತ್ತು ಮಗಳ ಮೇಲೆ ನಡೆದ ಅಮಾನವೀಯ ದೌರ್ಜನ್ಯ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಸದ್ಯ ಪೀಡಿತ ತಾಯಿ ಮತ್ತು ಮಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅವರ ಸುರಕ್ಷತೆಗೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ.

ಕೇವಲ ಕೆಲ ಸಾವಿರ ರೂಪಾಯಿ ಬಾಡಿಗೆಯ ಕಾರಣಕ್ಕೆ ತನ್ನದೇ ಕುಟುಂಬವನ್ನು ನರಕಕ್ಕೆ ತಳ್ಳಿದ ತಂದೆಯ ನಡೆ ಹಾಗೂ ಅದನ್ನು ದುರುಪಯೋಗಪಡಿಸಿಕೊಂಡ ಮನೆ ಮಾಲೀಕನ ಕ್ರೌರ್ಯ, ಸಮಾಜದ ಮೌಲ್ಯಗಳನ್ನೇ ಪ್ರಶ್ನಿಸುವಂತಾಗಿದೆ.

ಭ್ರಷ್ಟರ ಬೇಟೆ

Recent Posts

300 ಪುಟಗಳ ಭೀಕರ ವರದಿ! ಮೃತದೇಹಗಳ ಮೇಲೂ ಲೈಂಗಿಕ ದೌರ್ಜನ್ಯ?

2023ರ ಅಕ್ಟೋಬರ್ 7ರಂದು ನಡೆದ ದಾಳಿಯ ಬಳಿಕ ಹಮಾಸ್ ಸಂಘಟನೆಯ ವಶದಲ್ಲಿದ್ದ ಸೆರೆಯಾಳುಗಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ ಹಾಗೂ…

2 days ago

ಮೋದಿ ಭೇಟಿ ಮುನ್ನ ಜಿಲೆಟಿನ್-ಟೈಮರ್ ಪತ್ತೆ! ಉಗ್ರ ಸಂಚೋ? ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…

4 days ago

ಕಿರುತೆರೆ-ಬೆಳ್ಳಿತೆರೆಗೆ ಶಾಕ್‌: ನಟ ದಿಲೀಪ್‌ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್‌ ರಾಜ್…

4 days ago

ಭೂದಾಖಲೆಗಳ ನಕಲು ಶುಲ್ಕ ಪರಿಷ್ಕರಣೆ: ಸರ್ಕಾರದಿಂದ ಹೊಸ ಏಕರೂಪದ ದರ ಜಾರಿ

ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…

5 days ago

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

5 days ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 days ago