ದಾವಣಗೆರೆ: ವಾಹನ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಪೋಷಕರಿಗೆ ಪಾಠ ಕಲಿಸುವ ಉದ್ದೇಶದಿಂದ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಅಪ್ರಾಪ್ತ ಮಗನಿಗೆ ಬೈಕ್ ಒಪ್ಪಿಸಿದ್ದ ತಂದೆಗೆ ಸಂಚಾರಿ ಪೊಲೀಸರು 25 ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.
ಉತ್ತಮ್ಚಂದ್ ಬಡಾವಣೆಯ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ವಯಸ್ಸು ತಲುಪಿಲ್ಲದ ಮಗನಿಗೆ ಬೈಕ್ ನೀಡಿದ್ದರು. ಬಾಲಕ ಎಆರ್ಜೆ ಕಾಲೇಜು ಬಳಿ ಬೈಕ್ ಚಾಲನೆ ಮಾಡುತ್ತಿದ್ದಾಗ ಸಂಚಾರಿ ಪೊಲೀಸ್ ಪೆಟ್ರೋಲ್ ಪರಿಶೀಲನೆ ವೇಳೆ ತಗುಲಿದ. ವಿಚಾರಣೆ ನಡೆಸಿದ ಪೊಲೀಸರು ಬೈಕ್ ಮಾಲೀಕರನ್ನು ಕರೆಸಿ ಮಾಹಿತಿ ಪಡೆದುಕೊಂಡರು.
ಮಗನಿಗೆ ಪರವಾನಗಿ ಇಲ್ಲದೆ ಬೈಕ್ ನೀಡಿರುವ ತಂದೆಯ ತಪ್ಪಿಗೆ, ಸಂಚಾರಿ ಇಲಾಖೆ 25 ಸಾವಿರ ರೂಪಾಯಿ ದಂಡ ವಿಧಿಸಿ ಕಠಿಣ ಎಚ್ಚರಿಕೆ ನೀಡಿದೆ. ಇದೇ ರೀತಿಯ ತಪ್ಪು ಮತ್ತೆ ಮರುಕಳಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಪೊಲೀಸರು ವಾರ್ನಿಂಗ್ ನೀಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…