ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬುವರಿಂದ ಹಣ ಪಡೆದು ವಂಚಿಸಿದ್ದರು.
ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಇದೀಗ ಪ್ರಕರಣ ಸಂಬಂಧ ಪಿಎಸ್ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…