ಬೆಂಗಳೂರು, ಜುಲೈ 7: ನಗರದ ಬೊಮ್ಮಸಂದ್ರದ ಹೊಂಗಸಂದ್ರ ಪ್ರದೇಶದಲ್ಲಿ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ದಾಳಿಯಲ್ಲಿ ಸುಮಾರು 20ಕ್ಕೂ ಹೆಚ್ಚು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ದಾಳಿ ಬೆಂಗಳೂರುದಿಂದ ಚುನಾವಣೆಗೆ ಆಯ್ಕೆಯಾಗಿರುವ ಶಾಸಕ ಸತೀಶ್ ರೆಡ್ಡಿ ನಿವಾಸದ ಹಿಂಭಾಗದಲ್ಲಿ ನಡೆದಿದೆ. ರಾಜಕುಮಾರ್ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ 12 ಕಾರುಗಳು ಹಾಗೂ 8 ಆಟೋಗಳ ಮೇಲೆ ಇಂದು ಮುಂಜಾನೆ ಅನುಮಾನಾಸ್ಪದ ಗೂಂಡಾ ಗುಂಪು ದೊಣ್ಣೆ, ಕಲ್ಲು, ಕಬ್ಬಿಣದ ರಾಡ್ಗಳಿಂದ ದಾಳಿ ನಡೆಸಿದ್ದು, ವಾಹನಗಳ ಗಾಜುಗಳನ್ನು ಪುಡಿ ಮಾಡಿ, ಸಂಪೂರ್ಣ ಹಾನಿಗೊಳಪಡಿಸಿದ್ದಾರೆ.
ವಾಹನ ಮಾಲೀಕರು ಶಾಕ್ಗೆ ಒಳಗಾಗಿರುವ ಈ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ತಕ್ಷಣವೇ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಕುರಿತು ಎಫ್ಐಆರ್ ದಾಖಲಿಸಲಾಗಿದೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಆರೋಪಿ ಅರುಣ್, ಸಾಗರ್, ಸತೀಶ್ ಮತ್ತು ಮರಿಯಪ್ಪ ಎಂಬ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿಂದೆ ಭೂ ವಿವಾದ, ವೈಯಕ್ತಿಕ ದ್ವೇಷ ಅಥವಾ ಗ್ಯಾಂಗ್ ರಿವೆಂಜ್ ಇರಬಹುದೆಂಬ ಅಂಶದತ್ತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆಯಾದ ಪ್ರದೇಶದಲ್ಲಿ ಸಾರ್ವಜನಿಕರಲ್ಲಿ ಭೀತಿಯ ಪರಿಸ್ಥಿತಿ ಉಂಟಾಗಿದ್ದು, ಪೊಲೀಸರು ಹೆಚ್ಚುವರಿ ಭದ್ರತೆ ಕೈಗೊಂಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…