ಬೆಂಗಳೂರು: ಕರ್ನಾಟಕದಲ್ಲಿ ಹನಿಟ್ರ್ಯಾಪ್ ಮತ್ತು ರಾಜಕೀಯ ಮುಖಂಡರ ಸಿ.ಡಿ., ಪೆನ್ಡ್ರೈವ್ ಗಳ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ವಿಧಾನಸಭೆಯಲ್ಲಿ ರಾಜ್ಯದ 48 ರಾಜಕೀಯ ಮುಖಂಡರ ಕುರಿತಾದ ಸಿ.ಡಿ., ಪೆನ್ಡ್ರೈವ್ ತಯಾರಾಗಿರುವ ಮಾಹಿತಿ ಇದೆ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಪ್ರಯತ್ನ ಮತ್ತು ತನಿಖೆಯ ಅವಶ್ಯಕತೆ
ವಿಧಾನಸಭೆಯ ಬಜೆಟ್ ಭಾಷಣದ ಚರ್ಚೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಈ ವಿಷಯ ಪ್ರಸ್ತಾಪಿಸಿದರು. ರಾಜ್ಯದಲ್ಲಿ ಹನಿಟ್ರ್ಯಾಪ್ ಒಂದು ಕೆಟ್ಟ ಸಂಸ್ಕೃತಿ ಆಗಿ ಬೆಳೆಯುತ್ತಿದೆ. ಜನಪ್ರತಿನಿಧಿಗಳನ್ನು ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಸಚಿವ ರಾಜಣ್ಣ ಪ್ರತಿಕ್ರಿಯೆ ನೀಡುತ್ತಾ, “ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನವಾಗಿದೆ, ಮತ್ತು ನನ್ನ ಬಳಿ ಪುರಾವೆಗಳಿವೆ,” ಎಂದರು. ಈ ಕುರಿತು ಗೃಹ ಸಚಿವರ ಬಳಿ ಲಿಖಿತ ದೂರು ನೀಡುವುದಾಗಿ ತಿಳಿಸಿದರು. ರಾಜ್ಯ ಮಾತ್ರವಲ್ಲ, ದೇಶದಾದ್ಯಂತ ಹಲವಾರು ರಾಜಕೀಯ ನಾಯಕರು ಈ ತಂತ್ರದ ಬಲಿಯಾಗಿದ್ದಾರೆ ಎಂದು ಹೇಳಿದರು.
“ತುಮಕೂರಿನ ಇಬ್ಬರು ಪ್ರಭಾವಿ ಸಚಿವರು ಹನಿಟ್ರ್ಯಾಪ್ಗೆ ಸಿಕ್ಕಿದ್ದಾರೆ ಎಂಬ ಮಾತುಗಳಿವೆ. ತುಮಕೂರಿನಲ್ಲಿ ನಾನು ಮತ್ತು ಪರಮೇಶ್ವರ್ ಮಾತ್ರ ಸಚಿವರಾಗಿದ್ದೇವೆ. ಹೀಗಾಗಿ, ಗೃಹ ಸಚಿವರು ಸೂಕ್ತ ತನಿಖೆ ನಡೆಸಬೇಕು,” ಎಂದು ರಾಜಣ್ಣ ಒತ್ತಾಯಿಸಿದರು.
ಹನಿಟ್ರ್ಯಾಪ್ ಮತ್ತು ರಾಜಕೀಯ ದಾಳಿ
ಸಚಿವ ರಾಜಣ್ಣ ಅವರು “ಈ ಹಿಂದೆ ಹಲವು ನಾಯಕರು ಈ ತಂತ್ರದ ಮೂಲಕ ರಾಜಕೀಯ ಹಾನಿಗೆ ಒಳಗಾಗಿದ್ದಾರೆ. ಇದು ರಾಜ್ಯ ರಾಜಕಾರಣಕ್ಕೆ ಪಿಡುಗಾಗಿ ಪರಿಣಮಿಸಿದೆ” ಎಂದು ಅಭಿಪ್ರಾಯಪಟ್ಟರು. “ಸಾರ್ವಜನಿಕ ಜೀವನದಲ್ಲಿ ಮುಕ್ತ ಮತ್ತು ಗೌರವಯುತ ವಾತಾವರಣ ಇರಬೇಕಾದರೆ, ಈ ಹನಿಟ್ರ್ಯಾಪ್ ಮಾಫಿಯಾಗೆ ಅಂತ್ಯವಾಗಬೇಕು” ಎಂದು ಅವರು ಮನವಿ ಮಾಡಿದರು.
“ಸಿಡಿ, ಪೆನ್ಡ್ರೈವ್ ತಯಾರಿಸಿದವರ ಹಿಂದೆ ಯಾರು ಇದ್ದಾರೆ ಎಂಬುದನ್ನು ಬಹಿರಂಗ ಪಡಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಗೃಹ ಸಚಿವರು ಪರಮೇಶ್ವರ್ ಈ ಬಗ್ಗೆ ತಕ್ಷಣ ವಿಶೇಷ ತನಿಖೆಗೆ ಆದೇಶ ನೀಡಬೇಕು” ಎಂದು ರಾಜಣ್ಣ ಒತ್ತಾಯಿಸಿದರು.
ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾದ ಈ ಹೇಳಿಕೆ ಹಿನ್ನೆಲೆಯಲ್ಲಿ, ಸರ್ಕಾರ ಈ ಬಗ್ಗೆ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…