Politics

ಕರ್ನಾಟಕ ರಾಜಕೀಯದಲ್ಲಿ ಹನಿಟ್ರ್ಯಾಪ್ ಭೀತಿ: ಸಚಿವ ಕೆ.ಎನ್. ರಾಜಣ್ಣ ಅವರ ಸ್ಫೋಟಕ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಹನಿಟ್ರ್ಯಾಪ್ ಮತ್ತು ರಾಜಕೀಯ ಮುಖಂಡರ ಸಿ.ಡಿ., ಪೆನ್‌ಡ್ರೈವ್ ಗಳ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ವಿಧಾನಸಭೆಯಲ್ಲಿ  ರಾಜ್ಯದ 48 ರಾಜಕೀಯ ಮುಖಂಡರ ಕುರಿತಾದ ಸಿ.ಡಿ., ಪೆನ್‌ಡ್ರೈವ್ ತಯಾರಾಗಿರುವ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಹನಿಟ್ರ್ಯಾಪ್ ಪ್ರಯತ್ನ ಮತ್ತು ತನಿಖೆಯ ಅವಶ್ಯಕತೆ

ವಿಧಾನಸಭೆಯ ಬಜೆಟ್ ಭಾಷಣದ ಚರ್ಚೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಈ ವಿಷಯ ಪ್ರಸ್ತಾಪಿಸಿದರು. ರಾಜ್ಯದಲ್ಲಿ ಹನಿಟ್ರ್ಯಾಪ್ ಒಂದು ಕೆಟ್ಟ ಸಂಸ್ಕೃತಿ ಆಗಿ ಬೆಳೆಯುತ್ತಿದೆ. ಜನಪ್ರತಿನಿಧಿಗಳನ್ನು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಸಚಿವ ರಾಜಣ್ಣ ಪ್ರತಿಕ್ರಿಯೆ ನೀಡುತ್ತಾ, “ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನವಾಗಿದೆ, ಮತ್ತು ನನ್ನ ಬಳಿ ಪುರಾವೆಗಳಿವೆ,” ಎಂದರು. ಈ ಕುರಿತು ಗೃಹ ಸಚಿವರ ಬಳಿ ಲಿಖಿತ ದೂರು ನೀಡುವುದಾಗಿ ತಿಳಿಸಿದರು. ರಾಜ್ಯ ಮಾತ್ರವಲ್ಲ, ದೇಶದಾದ್ಯಂತ ಹಲವಾರು ರಾಜಕೀಯ ನಾಯಕರು ಈ ತಂತ್ರದ ಬಲಿಯಾಗಿದ್ದಾರೆ ಎಂದು ಹೇಳಿದರು.

“ತುಮಕೂರಿನ ಇಬ್ಬರು ಪ್ರಭಾವಿ ಸಚಿವರು ಹನಿಟ್ರ್ಯಾಪ್‌ಗೆ ಸಿಕ್ಕಿದ್ದಾರೆ ಎಂಬ ಮಾತುಗಳಿವೆ. ತುಮಕೂರಿನಲ್ಲಿ ನಾನು ಮತ್ತು ಪರಮೇಶ್ವರ್ ಮಾತ್ರ ಸಚಿವರಾಗಿದ್ದೇವೆ. ಹೀಗಾಗಿ, ಗೃಹ ಸಚಿವರು ಸೂಕ್ತ ತನಿಖೆ ನಡೆಸಬೇಕು,” ಎಂದು ರಾಜಣ್ಣ ಒತ್ತಾಯಿಸಿದರು.

ಹನಿಟ್ರ್ಯಾಪ್ ಮತ್ತು ರಾಜಕೀಯ ದಾಳಿ

ಸಚಿವ ರಾಜಣ್ಣ ಅವರು “ಈ ಹಿಂದೆ ಹಲವು ನಾಯಕರು ಈ ತಂತ್ರದ ಮೂಲಕ ರಾಜಕೀಯ ಹಾನಿಗೆ ಒಳಗಾಗಿದ್ದಾರೆ. ಇದು ರಾಜ್ಯ ರಾಜಕಾರಣಕ್ಕೆ ಪಿಡುಗಾಗಿ ಪರಿಣಮಿಸಿದೆ” ಎಂದು ಅಭಿಪ್ರಾಯಪಟ್ಟರು. “ಸಾರ್ವಜನಿಕ ಜೀವನದಲ್ಲಿ ಮುಕ್ತ ಮತ್ತು ಗೌರವಯುತ ವಾತಾವರಣ ಇರಬೇಕಾದರೆ, ಈ ಹನಿಟ್ರ್ಯಾಪ್ ಮಾಫಿಯಾಗೆ ಅಂತ್ಯವಾಗಬೇಕು” ಎಂದು ಅವರು ಮನವಿ ಮಾಡಿದರು.

“ಸಿಡಿ, ಪೆನ್‌ಡ್ರೈವ್ ತಯಾರಿಸಿದವರ ಹಿಂದೆ ಯಾರು ಇದ್ದಾರೆ ಎಂಬುದನ್ನು ಬಹಿರಂಗ ಪಡಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಗೃಹ ಸಚಿವರು ಪರಮೇಶ್ವರ್ ಈ ಬಗ್ಗೆ ತಕ್ಷಣ ವಿಶೇಷ ತನಿಖೆಗೆ ಆದೇಶ ನೀಡಬೇಕು” ಎಂದು ರಾಜಣ್ಣ ಒತ್ತಾಯಿಸಿದರು.

ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾದ ಈ ಹೇಳಿಕೆ ಹಿನ್ನೆಲೆಯಲ್ಲಿ, ಸರ್ಕಾರ ಈ ಬಗ್ಗೆ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

7 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

9 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

20 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

20 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

20 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

21 hours ago