Politics

ಕರ್ನಾಟಕ ರಾಜಕೀಯದಲ್ಲಿ ಹನಿಟ್ರ್ಯಾಪ್ ಭೀತಿ: ಸಚಿವ ಕೆ.ಎನ್. ರಾಜಣ್ಣ ಅವರ ಸ್ಫೋಟಕ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಹನಿಟ್ರ್ಯಾಪ್ ಮತ್ತು ರಾಜಕೀಯ ಮುಖಂಡರ ಸಿ.ಡಿ., ಪೆನ್‌ಡ್ರೈವ್ ಗಳ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ವಿಧಾನಸಭೆಯಲ್ಲಿ  ರಾಜ್ಯದ 48 ರಾಜಕೀಯ ಮುಖಂಡರ ಕುರಿತಾದ ಸಿ.ಡಿ., ಪೆನ್‌ಡ್ರೈವ್ ತಯಾರಾಗಿರುವ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಹನಿಟ್ರ್ಯಾಪ್ ಪ್ರಯತ್ನ ಮತ್ತು ತನಿಖೆಯ ಅವಶ್ಯಕತೆ

ವಿಧಾನಸಭೆಯ ಬಜೆಟ್ ಭಾಷಣದ ಚರ್ಚೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಈ ವಿಷಯ ಪ್ರಸ್ತಾಪಿಸಿದರು. ರಾಜ್ಯದಲ್ಲಿ ಹನಿಟ್ರ್ಯಾಪ್ ಒಂದು ಕೆಟ್ಟ ಸಂಸ್ಕೃತಿ ಆಗಿ ಬೆಳೆಯುತ್ತಿದೆ. ಜನಪ್ರತಿನಿಧಿಗಳನ್ನು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಸಚಿವ ರಾಜಣ್ಣ ಪ್ರತಿಕ್ರಿಯೆ ನೀಡುತ್ತಾ, “ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನವಾಗಿದೆ, ಮತ್ತು ನನ್ನ ಬಳಿ ಪುರಾವೆಗಳಿವೆ,” ಎಂದರು. ಈ ಕುರಿತು ಗೃಹ ಸಚಿವರ ಬಳಿ ಲಿಖಿತ ದೂರು ನೀಡುವುದಾಗಿ ತಿಳಿಸಿದರು. ರಾಜ್ಯ ಮಾತ್ರವಲ್ಲ, ದೇಶದಾದ್ಯಂತ ಹಲವಾರು ರಾಜಕೀಯ ನಾಯಕರು ಈ ತಂತ್ರದ ಬಲಿಯಾಗಿದ್ದಾರೆ ಎಂದು ಹೇಳಿದರು.

“ತುಮಕೂರಿನ ಇಬ್ಬರು ಪ್ರಭಾವಿ ಸಚಿವರು ಹನಿಟ್ರ್ಯಾಪ್‌ಗೆ ಸಿಕ್ಕಿದ್ದಾರೆ ಎಂಬ ಮಾತುಗಳಿವೆ. ತುಮಕೂರಿನಲ್ಲಿ ನಾನು ಮತ್ತು ಪರಮೇಶ್ವರ್ ಮಾತ್ರ ಸಚಿವರಾಗಿದ್ದೇವೆ. ಹೀಗಾಗಿ, ಗೃಹ ಸಚಿವರು ಸೂಕ್ತ ತನಿಖೆ ನಡೆಸಬೇಕು,” ಎಂದು ರಾಜಣ್ಣ ಒತ್ತಾಯಿಸಿದರು.

ಹನಿಟ್ರ್ಯಾಪ್ ಮತ್ತು ರಾಜಕೀಯ ದಾಳಿ

ಸಚಿವ ರಾಜಣ್ಣ ಅವರು “ಈ ಹಿಂದೆ ಹಲವು ನಾಯಕರು ಈ ತಂತ್ರದ ಮೂಲಕ ರಾಜಕೀಯ ಹಾನಿಗೆ ಒಳಗಾಗಿದ್ದಾರೆ. ಇದು ರಾಜ್ಯ ರಾಜಕಾರಣಕ್ಕೆ ಪಿಡುಗಾಗಿ ಪರಿಣಮಿಸಿದೆ” ಎಂದು ಅಭಿಪ್ರಾಯಪಟ್ಟರು. “ಸಾರ್ವಜನಿಕ ಜೀವನದಲ್ಲಿ ಮುಕ್ತ ಮತ್ತು ಗೌರವಯುತ ವಾತಾವರಣ ಇರಬೇಕಾದರೆ, ಈ ಹನಿಟ್ರ್ಯಾಪ್ ಮಾಫಿಯಾಗೆ ಅಂತ್ಯವಾಗಬೇಕು” ಎಂದು ಅವರು ಮನವಿ ಮಾಡಿದರು.

“ಸಿಡಿ, ಪೆನ್‌ಡ್ರೈವ್ ತಯಾರಿಸಿದವರ ಹಿಂದೆ ಯಾರು ಇದ್ದಾರೆ ಎಂಬುದನ್ನು ಬಹಿರಂಗ ಪಡಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಗೃಹ ಸಚಿವರು ಪರಮೇಶ್ವರ್ ಈ ಬಗ್ಗೆ ತಕ್ಷಣ ವಿಶೇಷ ತನಿಖೆಗೆ ಆದೇಶ ನೀಡಬೇಕು” ಎಂದು ರಾಜಣ್ಣ ಒತ್ತಾಯಿಸಿದರು.

ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾದ ಈ ಹೇಳಿಕೆ ಹಿನ್ನೆಲೆಯಲ್ಲಿ, ಸರ್ಕಾರ ಈ ಬಗ್ಗೆ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago