Categories: CrimeLatest

ಮಾವನ ರೂಲ್ಸ್‌ಗೆ ಬೇಸತ್ತು ಸೊಸೆಯಿಂದಲೇ ಕೊಲೆಗೆ ಸುಪಾರಿ; 26 ಬಾರಿ ಇರಿದು ಉದ್ಯಮಿ ಹತ್ಯೆ!

ಕಾನ್ಪುರ: ಮನೆಯಲ್ಲಿ ಹೆಜ್ಜೆ ಹೆಜ್ಜೆಗೂ ನಿಗಾ, ಪಾರ್ಟಿ ಮಾಡಲು ನಿರ್ಬಂಧ, ಖರ್ಚು ಮಾಡಲು ಹಣದ ಮೇಲೂ ನಿಯಂತ್ರಣ… ಉದ್ಯಮಿ ಮಾವನ ಕಠಿಣ ನಿಯಮಗಳಿಂದ ಬೇಸತ್ತ ಸೊಸೆಯೊಬ್ಬಳು ಕೊಲೆಗೆ ಸುಪಾರಿ ನೀಡಿದ ಆರೋಪ ಕೇಳಿಬಂದಿದೆ. ಕೊನೆಗೆ ಉದ್ಯಮಿ ಮಾವನನ್ನು 26 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸೊಸೆಯನ್ನೇ ಪ್ರಮುಖ ಆರೋಪಿಯಾಗಿ ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಉದ್ಯಮಿ ವಿನೀತ್ ಮಿನೋಚಾ ಅವರು ಕಾನ್ಪುರದ ಇಂದಿರಾ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ದುಷ್ಕರ್ಮಿಗಳು ಅವರ ಕತ್ತು ಸೀಳಿ, ದೇಹದ ವಿವಿಧ ಭಾಗಗಳಿಗೆ 26 ಬಾರಿ ಇರಿದು ಹತ್ಯೆ ಮಾಡಿದ್ದರು. ಘಟನೆ ನಡೆದ ಸ್ಥಳದಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ಕಳವಾಗಿರಲಿಲ್ಲ. ಹೀಗಾಗಿ ಇದು ದರೋಡೆಗಾಗಿ ನಡೆದ ಕೊಲೆಯಲ್ಲ ಎಂಬ ಅನುಮಾನ ಪೊಲೀಸರಿಗೆ ಮೂಡಿತ್ತು.

ಈ ಸುಳಿವಿನ ಆಧಾರದಲ್ಲಿ ತನಿಖೆ ಮುಂದುವರಿಸಿದ ಪೊಲೀಸರು, ಕೊಲೆ ನಡೆದ ನಾಲ್ಕೈದು ದಿನಗಳಲ್ಲೇ ಪ್ರಕರಣವನ್ನು ಭೇದಿಸಿದ್ದಾರೆ. ಉದ್ಯಮಿಯ ಸೊಸೆ ಶಾಲು ಮಿನೋಚಾ, ಅವರ ಮಾವನ ಬಳಿ ಈ ಹಿಂದೆ ಕೆಲಸ ಮಾಡುತ್ತಿದ್ದ ಮಾಜಿ ಉದ್ಯೋಗಿ ವಿಶಾಲ್ ಹಾಗೂ 30 ವರ್ಷದ ನಿರುದ್ಯೋಗಿ ಪರಿಚಯಸ್ಥ ರಾಜ್ ಕಿಶೋರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಶಾಲು ನೀಡಿರುವ ಹೇಳಿಕೆಯ ಪ್ರಕಾರ, ವಿನೀತ್ ಅವರು ತಮ್ಮ ಮಗ ಮತ್ತು ಸೊಸೆಯ ಖರ್ಚು-ವೆಚ್ಚಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಟ್ಟಿದ್ದರು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿದ್ದಲ್ಲದೆ, ಸಣ್ಣಪುಟ್ಟ ಖರ್ಚಿಗೂ ಅವರ ಅನುಮತಿ ಪಡೆಯಬೇಕಾಗಿತ್ತು. ತಡರಾತ್ರಿ ಮನೆಗೆ ಬರುವುದಕ್ಕೂ ನಿರ್ಬಂಧವಿತ್ತು. ಪಾರ್ಟಿ ಸೇರಿದಂತೆ ಹಲವು ಚಟುವಟಿಕೆಗಳ ಮೇಲೂ ನಿಯಂತ್ರಣ ಹೇರಲಾಗಿತ್ತು ಎನ್ನಲಾಗಿದೆ.

ಇದರ ನಡುವೆ, ವಿನೀತ್ ಸಾವಿಗೂ ಸುಮಾರು 15ರಿಂದ 20 ದಿನಗಳ ಹಿಂದೆ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಇದರಿಂದ ತಮ್ಮ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ ಎಂದು ಶಾಲು ಆಕ್ಷೇಪ ವ್ಯಕ್ತಪಡಿಸಿದ್ದರೂ, ವಿನೀತ್ ಅದನ್ನು ಲೆಕ್ಕಿಸಿರಲಿಲ್ಲ ಎನ್ನಲಾಗಿದೆ. ಈ ವಿಚಾರವೂ ಆಕೆಯ ಅಸಮಾಧಾನಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಹೀಗಾಗಿ ಮಾವನ ಕಠಿಣ ನಿಯಮಗಳು ಹಾಗೂ ನಿರಂತರ ನಿಗೆಯಿಂದ ಬೇಸತ್ತ ಶಾಲು, ಮಾಜಿ ಉದ್ಯೋಗಿ ವಿಶಾಲ್ ಮತ್ತು ರಾಜ್ ಕಿಶೋರ್ ನೆರವಿನೊಂದಿಗೆ ಕೊಲೆಗೆ ಸಂಚು ರೂಪಿಸಿ ಸುಪಾರಿ ನೀಡಿದ್ದಾಳೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮೂವರನ್ನೂ ಬಂಧಿಸಿರುವ ಪೊಲೀಸರು, ಕೊಲೆಯ ಹಿಂದಿನ ಸಂಪೂರ್ಣ ಸಂಚು ಹಾಗೂ ಹಣದ ವಹಿವಾಟಿನ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

3 hours ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

3 hours ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

7 hours ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನ ಸೇರಿದಂತೆ 9 ದೇವಸ್ಥಾನಗಳಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳರ ಬಂಧನ, 21 ಕೆಜಿ ಬೆಳ್ಳಿ ಆಭರಣ ವಶ

ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…

7 hours ago

ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿದ ಶೂ–ಸ್ಯಾಂಡಲ್ ಕಳಪೆ? ಸೆ.18ರೊಳಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…

8 hours ago

ಅಂಬೇಡ್ಕರ್ ವೃತ್ತದ ಬಳಿ ಭೀಕರ ಅಪಘಾತ: 8 ವರ್ಷದ ಬಾಲಕ ರಯಾನ್ ದುರ್ಮರಣ

ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ…

24 hours ago