Latest

ಇಸ್ಲಾಮಾಬಾದ್‌ನಲ್ಲಿ “ಸ್ಕ್ಯಾಮ್ ಸೆಂಟರ್” ಮೇಲೆ FIA ದಾಳಿ: ದಾಳಿ ಬಳಿಕ ಲೂಟಿಗೈದ ಯುವಕರು

ಇಸ್ಲಾಮಾಬಾದ್‌ನ ಸೆಕ್ಟರ್ ಎಫ್-11ನಲ್ಲಿರುವ “ಸ್ಕ್ಯಾಮ್ ಸೆಂಟರ್” ಮೇಲೆ ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ (FIA) ಮತ್ತು ಗುಪ್ತಚರ ಏಜೆನ್ಸಿ ದಾಳಿ ನಡೆಸಿದ್ದು, ಸ್ಥಳೀಯ ಯುವಕರು ಕಂಪ್ಯೂಟರ್, ಲ್ಯಾಪ್‌ಟಾಪ್ ಮತ್ತು ಇತರ ಉಪಕರಣಗಳನ್ನು ದೋಚಿ ಪರಾರಿಯಾಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ದಾಳಿಯ ವೇಳೆ ಲೂಟಿ, ಅಧಿಕಾರಿಗಳ ನಿರ್ವಹಣೆಯ ಬಗ್ಗೆ ಪ್ರಶ್ನೆ
ವಿಡಿಯೋಗಳಲ್ಲಿ ಯುವಕರ ಗುಂಪು ಸ್ಕ್ಯಾಮ್ ಸೆಂಟರ್‌ಗೆ ನುಗ್ಗಿ ತಂತ್ರಜ್ಞಾನ ಉಪಕರಣಗಳನ್ನು ಹೊತ್ತೊಯ್ಯುವ ದೃಶ್ಯ ಸೆರೆಯಾಗಿದೆ. ಈ ಘಟನೆಯು ಅಧಿಕಾರಿಗಳ ಕಾರ್ಯಾಚರಣೆ ಪ್ರಕ್ರಿಯೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಂತಾರಾಷ್ಟ್ರೀಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ದಾಳಿ
The Nation ವರದಿ ಪ್ರಕಾರ, FIAನ ಸೈಬರ್ ಕ್ರೈಮ್ ಸೆಲ್ ಶನಿವಾರ (ಮಾರ್ಚ್ 15) ಅಂತರಾಷ್ಟ್ರೀಯ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಈ ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿತು. ಈ ಕೇಂದ್ರದಲ್ಲಿ ವಿದೇಶಿಯರು ಸೇರಿದಂತೆ 24ಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವರು ಸ್ಥಳದಿಂದ ತಪ್ಪಿಸಿಕೊಂಡಿದ್ದರೆ, ಇತರರನ್ನು ಬಂಧಿಸಿ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

ವಂಚನಾ ಚಟುವಟಿಕೆಗೆ ಸಂಬಂಧಿಸಿದ ತನಿಖೆ ಮುಂದುವರಿಯುತ್ತಿದೆ
FIA ಮೂಲಗಳ ಪ್ರಕಾರ, ಈ ಕಾಲ್ ಸೆಂಟರ್‌ನಲ್ಲಿ ಅನಧಿಕೃತ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿ ಇರಲಿದ್ದು, ಉನ್ನತ ಅಧಿಕಾರಿಗಳ ಅನುಮತಿ ಪಡೆದು ದಾಳಿ ನಡೆಸಲಾಗಿದೆ. ಈ ಕೇಂದ್ರವು ವಂಚನಾ ಸ್ಕೀಮ್‌ಗಳ ಮೂಲಕ ಪಾಕಿಸ್ತಾನಿ ನಾಗರಿಕರನ್ನೇ ಮೋಸಗೊಳಿಸುತ್ತಿದ್ದವು ಎಂದು ವರದಿ ಹೇಳಿದೆ.

ಲೂಟಿಗೈದ ಉಪಕರಣಗಳ ವಶಪಡಿಸಿಕೊಳ್ಳುವ ಕ್ರಮ
ದಾಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಸ್ಥಳೀಯರಿಗೆ ಪ್ರವೇಶಕ್ಕೆ ಅವಕಾಶ ನೀಡಿದ್ದರಿಂದ, ಬೆಲೆ ಬಾಳುವ ಉಪಕರಣಗಳು ಲೂಟಿಗೀಡಾಗಿವೆ. ಈಗ, ಆ ಉಪ್ಪಕರಣಗಳನ್ನು ದಾಖಲೆಗಾಗಿ ವಶಪಡಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರನ್ನು ಹೆಚ್ಚಿನ ವಿಚಾರಣೆಗೆ FIA ಕಚೇರಿಗೆ ರವಾನಿಸಲಾಗಿದೆ. ವಿದೇಶಿಯರು ಈ ವಂಚನಾ ಜಾಲದಲ್ಲಿ ಭಾಗಿಯಾಗಿರುವ ಕುರಿತು ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

11 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

12 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

12 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

14 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

15 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

18 hours ago