Latest

ಇಸ್ಲಾಮಾಬಾದ್‌ನಲ್ಲಿ “ಸ್ಕ್ಯಾಮ್ ಸೆಂಟರ್” ಮೇಲೆ FIA ದಾಳಿ: ದಾಳಿ ಬಳಿಕ ಲೂಟಿಗೈದ ಯುವಕರು

ಇಸ್ಲಾಮಾಬಾದ್‌ನ ಸೆಕ್ಟರ್ ಎಫ್-11ನಲ್ಲಿರುವ “ಸ್ಕ್ಯಾಮ್ ಸೆಂಟರ್” ಮೇಲೆ ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ (FIA) ಮತ್ತು ಗುಪ್ತಚರ ಏಜೆನ್ಸಿ ದಾಳಿ ನಡೆಸಿದ್ದು, ಸ್ಥಳೀಯ ಯುವಕರು ಕಂಪ್ಯೂಟರ್, ಲ್ಯಾಪ್‌ಟಾಪ್ ಮತ್ತು ಇತರ ಉಪಕರಣಗಳನ್ನು ದೋಚಿ ಪರಾರಿಯಾಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ದಾಳಿಯ ವೇಳೆ ಲೂಟಿ, ಅಧಿಕಾರಿಗಳ ನಿರ್ವಹಣೆಯ ಬಗ್ಗೆ ಪ್ರಶ್ನೆ
ವಿಡಿಯೋಗಳಲ್ಲಿ ಯುವಕರ ಗುಂಪು ಸ್ಕ್ಯಾಮ್ ಸೆಂಟರ್‌ಗೆ ನುಗ್ಗಿ ತಂತ್ರಜ್ಞಾನ ಉಪಕರಣಗಳನ್ನು ಹೊತ್ತೊಯ್ಯುವ ದೃಶ್ಯ ಸೆರೆಯಾಗಿದೆ. ಈ ಘಟನೆಯು ಅಧಿಕಾರಿಗಳ ಕಾರ್ಯಾಚರಣೆ ಪ್ರಕ್ರಿಯೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಂತಾರಾಷ್ಟ್ರೀಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ದಾಳಿ
The Nation ವರದಿ ಪ್ರಕಾರ, FIAನ ಸೈಬರ್ ಕ್ರೈಮ್ ಸೆಲ್ ಶನಿವಾರ (ಮಾರ್ಚ್ 15) ಅಂತರಾಷ್ಟ್ರೀಯ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಈ ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿತು. ಈ ಕೇಂದ್ರದಲ್ಲಿ ವಿದೇಶಿಯರು ಸೇರಿದಂತೆ 24ಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವರು ಸ್ಥಳದಿಂದ ತಪ್ಪಿಸಿಕೊಂಡಿದ್ದರೆ, ಇತರರನ್ನು ಬಂಧಿಸಿ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

ವಂಚನಾ ಚಟುವಟಿಕೆಗೆ ಸಂಬಂಧಿಸಿದ ತನಿಖೆ ಮುಂದುವರಿಯುತ್ತಿದೆ
FIA ಮೂಲಗಳ ಪ್ರಕಾರ, ಈ ಕಾಲ್ ಸೆಂಟರ್‌ನಲ್ಲಿ ಅನಧಿಕೃತ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿ ಇರಲಿದ್ದು, ಉನ್ನತ ಅಧಿಕಾರಿಗಳ ಅನುಮತಿ ಪಡೆದು ದಾಳಿ ನಡೆಸಲಾಗಿದೆ. ಈ ಕೇಂದ್ರವು ವಂಚನಾ ಸ್ಕೀಮ್‌ಗಳ ಮೂಲಕ ಪಾಕಿಸ್ತಾನಿ ನಾಗರಿಕರನ್ನೇ ಮೋಸಗೊಳಿಸುತ್ತಿದ್ದವು ಎಂದು ವರದಿ ಹೇಳಿದೆ.

ಲೂಟಿಗೈದ ಉಪಕರಣಗಳ ವಶಪಡಿಸಿಕೊಳ್ಳುವ ಕ್ರಮ
ದಾಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಸ್ಥಳೀಯರಿಗೆ ಪ್ರವೇಶಕ್ಕೆ ಅವಕಾಶ ನೀಡಿದ್ದರಿಂದ, ಬೆಲೆ ಬಾಳುವ ಉಪಕರಣಗಳು ಲೂಟಿಗೀಡಾಗಿವೆ. ಈಗ, ಆ ಉಪ್ಪಕರಣಗಳನ್ನು ದಾಖಲೆಗಾಗಿ ವಶಪಡಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರನ್ನು ಹೆಚ್ಚಿನ ವಿಚಾರಣೆಗೆ FIA ಕಚೇರಿಗೆ ರವಾನಿಸಲಾಗಿದೆ. ವಿದೇಶಿಯರು ಈ ವಂಚನಾ ಜಾಲದಲ್ಲಿ ಭಾಗಿಯಾಗಿರುವ ಕುರಿತು ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago