Categories: CrimeLatest

ಅಕ್ಕನ ಗಂಡನಿಗಾಗಿ ಭಾವಿ ಪತಿಯನ್ನೇ ಕಾಡಿಗೆ ಕರೆಸಿ ಕೊಲೆ! ಮದುವೆಗೂ ಮುನ್ನ ಬಯಲಾಯ್ತು ಭಯಾನಕ ಸಂಚು

ಝಾರ್ಖಂಡ್‌ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮದುವೆಗೆ ನಿಶ್ಚಯವಾಗಿದ್ದ ಯುವಕನನ್ನು ಕಾಡಿಗೆ ಕರೆಸಿ ಹತ್ಯೆಗೈದ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ಅಕ್ಕನ ಗಂಡನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವತಿ, ಮದುವೆಯಾದರೆ ಆ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಭಾವಿ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾಳೆ.

ಜಮುವಾ ಚೌಕ್ ನಿವಾಸಿ 20 ವರ್ಷದ ನೀರಜ್‌ಗೆ ಊರ್ಮಿಳಾ ಎಂಬ ಯುವತಿಯೊಂದಿಗೆ ಕುಟುಂಬಸ್ಥರು ಮದುವೆ ನಿಶ್ಚಯಿಸಿದ್ದರು. ಮದುವೆ ಸಿದ್ಧತೆಗಳು ಎರಡೂ ಕುಟುಂಬಗಳಲ್ಲಿ ಜೋರಾಗಿ ನಡೆಯುತ್ತಿದ್ದರೂ, ಊರ್ಮಿಳಾ ತನ್ನ ಅಕ್ಕನ ಪತಿ ಸುಭಾಷ್ ಪಾಸ್ವಾನ್‌ನೊಂದಿಗೆ ಅಕ್ರಮ ಸಂಬಂಧ ಮುಂದುವರಿಸುತ್ತಿದ್ದಳು ಎನ್ನಲಾಗಿದೆ. ಈ ಸಂಬಂಧಕ್ಕೆ ನೀರಜ್ ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ಇಬ್ಬರೂ ಸೇರಿ ಕೊಲೆ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಿನಂತೆ ಊರ್ಮಿಳಾ, ನೀರಜ್‌ಗೆ ಕರೆ ಮಾಡಿ ಯಾರಿಗೂ ತಿಳಿಸದೆ ಕಾಡಿನ ಪ್ರದೇಶಕ್ಕೆ ಬರಲು ಹೇಳಿದ್ದಳು. ಭಾವಿ ಪತ್ನಿಯ ಮಾತನ್ನು ನಂಬಿದ ನೀರಜ್ ನಿಗದಿತ ಸ್ಥಳಕ್ಕೆ ತೆರಳಿದ್ದಾನೆ. ಅಲ್ಲಿ ಮೊದಲೇ ಅಡಗಿ ಕುಳಿತಿದ್ದ ಸುಭಾಷ್ ಮತ್ತು ಊರ್ಮಿಳಾ, ನೀರಜ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾರೆ. ಗಂಭೀರ ಗಾಯಗೊಂಡ ನೀರಜ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಳಿಕ ಆರೋಪಿಗಳು ಮೃತದೇಹವನ್ನು ಬಿಟ್ಟು ಪರಾರಿಯಾಗಿದ್ದರು.

ಮಗ ಮನೆಗೆ ವಾಪಸ್ ಬಾರದೇ ಇದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ವೇಳೆ ಮೊಬೈಲ್ ಕರೆ ವಿವರಗಳು ಹಾಗೂ ಲೊಕೇಶನ್ ಪರಿಶೀಲಿಸಿದಾಗ, ನೀರಜ್ ಮತ್ತು ಊರ್ಮಿಳಾ ಇಬ್ಬರ ಮೊಬೈಲ್‌ಗಳು ಒಂದೇ ಸಮಯದಲ್ಲಿ ಬೇಲಾ ಅರಣ್ಯ ಪ್ರದೇಶದಲ್ಲಿದ್ದವು ಎಂಬುದು ಗೊತ್ತಾಗಿದೆ.

ಈ ಆಧಾರದ ಮೇಲೆ ಊರ್ಮಿಳಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅಕ್ಕನ ಗಂಡನೊಂದಿಗೆ ಹೊಂದಿದ್ದ ಅಕ್ರಮ ಸಂಬಂಧಕ್ಕಾಗಿ ಭಾವಿ ಪತಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಸುಭಾಷ್ ಪಾಸ್ವಾನ್‌ನನ್ನೂ ಬಂಧಿಸಲಾಗಿದ್ದು, ಇಬ್ಬರ ವಿರುದ್ಧ ಕೊಲೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

17 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

17 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

17 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago