ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಸಗೊಬ್ಬರ ಖರೀದಿಸಲು ರೈತರು ಎಫ್ಐಡಿ (ಫಾರ್ಮರ್ ಐಡಿ) ಕಡ್ಡಾಯವಾಗಿ ಹೊಂದಿರಬೇಕು ಎಂದು ಆದೇಶ ಹೊರಡಿಸಲಾಗಿದೆ.
ಈ ಕ್ರಮದ ಪ್ರಮುಖ ಉದ್ದೇಶ, ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡುವುದು ಹಾಗೂ ಕೃತಕ ಅಭಾವ ಸೃಷ್ಟಿಸುವುದನ್ನು ತಡೆಯುವುದಾಗಿದೆ. ಜೊತೆಗೆ ರೈತರು ಅಗತ್ಯಕ್ಕಿಂತ ಹೆಚ್ಚು ಗೊಬ್ಬರ ಬಳಕೆ ಮಾಡುವುದನ್ನು ನಿಯಂತ್ರಿಸಿ, ವೈಜ್ಞಾನಿಕ ರೀತಿಯಲ್ಲಿ ಗೊಬ್ಬರ ಹಂಚಿಕೆಯನ್ನು ಖಚಿತಪಡಿಸಲು ಸರ್ಕಾರ ಮುಂದಾಗಿದೆ.
ಯೂರಿಯಾ ಮತ್ತು ಡಿಎಪಿ ಉತ್ಪಾದನೆಗೆ ಬೇಕಾದ ಪ್ರಮುಖ ಕಚ್ಚಾ ವಸ್ತುಗಳು ಹಾಗೂ ನೈಸರ್ಗಿಕ ಅನಿಲವು ಹೆಚ್ಚಾಗಿ ಕತಾರ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಕೊಲ್ಲಿ ದೇಶಗಳಿಂದ ಆಮದಾಗುತ್ತವೆ. ಪ್ರಸ್ತುತ ಯುದ್ಧದ ಪರಿಸ್ಥಿತಿಯಿಂದಾಗಿ ಈ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಆತಂಕವಿದೆ.
ಎಫ್ಐಡಿ ವ್ಯವಸ್ಥೆಯ ಮೂಲಕ ರೈತರ ಜಮೀನಿನ ಅಳತೆಗೆ ಅನುಗುಣವಾಗಿ ಅವರಿಗೆ ಅಗತ್ಯವಿರುವಷ್ಟು ಮಾತ್ರ ಗೊಬ್ಬರ ವಿತರಿಸಲಾಗುವುದು. ಇದರಿಂದ ಗೊಬ್ಬರದ ಸಮರ್ಪಕ ಹಾಗೂ ವೈಜ್ಞಾನಿಕ ಬಳಕೆಗೆ ಉತ್ತೇಜನ ಸಿಗಲಿದೆ.
ಇದೇವೇಳೆ, ರಾಜ್ಯಕ್ಕೆ ಈ ವರ್ಷ ಸುಮಾರು 30 ಲಕ್ಷ ಟನ್ ರಸಗೊಬ್ಬರ ಹಂಚಿಕೆಯಾಗಿದೆ. ಅದರಲ್ಲಿ 35-40 ಶೇಕಡಾ, ಅಂದರೆ 10-12 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಸೇರಿದೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 11.4 ಲಕ್ಷ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ತಿಳಿದುಬಂದಿದೆ.
ಕೃಷಿ ಇಲಾಖೆ ರೈತರಿಗೆ ಅತಿಯಾದ ಯೂರಿಯಾ ಬಳಕೆಯನ್ನು ಕಡಿಮೆ ಮಾಡುವಂತೆ ಸಲಹೆ ನೀಡಿದೆ. ಸಾಮಾನ್ಯವಾಗಿ ಒಂದು ಎಕರೆಗೆ 1 ರಿಂದ 2 ಚೀಲ ಗೊಬ್ಬರ ಸಾಕಾಗುವ ಸಂದರ್ಭದಲ್ಲಿ, ಕೆಲವರು 4-5 ಚೀಲಗಳನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ನಿಯಂತ್ರಿಸಲು ಎಫ್ಐಡಿ ವ್ಯವಸ್ಥೆ ಸಹಕಾರಿಯಾಗಲಿದೆ.
ಈ ಹೊಸ ನಿಯಮದಿಂದ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ಅರ್ಹ ರೈತರಿಗೆ ಸರಿಯಾದ ಸಮಯದಲ್ಲಿ ಗೊಬ್ಬರ ಲಭ್ಯವಾಗಲಿದೆ ಎಂಬ ವಿಶ್ವಾಸವನ್ನು ಸರ್ಕಾರ ವ್ಯಕ್ತಪಡಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…