ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಸಿಬ್ಬಂದಿ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಲಿ ಇರುವ ಸುಮಾರು 4000 ಬೋಧಕ ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 1000 ಹುದ್ದೆಗಳನ್ನು ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಯುಜಿಸಿ 12ಬಿ ಮಾನ್ಯತೆ ಪಡೆಯಲು ವಿಶ್ವವಿದ್ಯಾಲಯಗಳಲ್ಲಿ ಕಾಯಂ ಬೋಧಕರಿರಬೇಕು. ಈ ಮಾನ್ಯತೆ ಸಿಕ್ಕರೆ ಕೇಂದ್ರದಿಂದ ಆರ್ಥಿಕ ನೆರವು ದೊರೆಯುತ್ತದೆ. ಆದರೆ ಹಲವು ವರ್ಷಗಳಿಂದ ನೇಮಕಾತಿ ಇಲ್ಲದ ಕಾರಣ, ಅತಿಥಿ ಉಪನ್ಯಾಸಕರ ಮೇಲೆ ಅವಲಂಬನೆ ಹೆಚ್ಚಾಗಿತ್ತು ಮತ್ತು ಸಂಶೋಧನಾ ಚಟುವಟಿಕೆಗಳಿಗೂ ಅಡಚಣೆ ಉಂಟಾಗಿತ್ತು.

ಈ ಹಿನ್ನೆಲೆ ಸರ್ಕಾರ ನೇರ ನೇಮಕಾತಿಗೆ ಮುಂದಾಗಿದ್ದು, ಪಾರದರ್ಶಕತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಉಳಿದ 3000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಯೋಜನೆ ಇದೆ.

ಈ ಕ್ರಮದಿಂದ ವಿಶ್ವವಿದ್ಯಾಲಯಗಳ ಗುಣಮಟ್ಟ ಹೆಚ್ಚುವುದರ ಜೊತೆಗೆ NET, K-SET, Ph.D ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉದ್ಯೋಗದ ಅವಕಾಶಗಳು ಹೆಚ್ಚಲಿವೆ.

Related News

error: Content is protected !!