Latest

ಕೊನೆಗೂ ಆರ್.ಸಿ.ಬಿ ಗೆ ಒಲಿಯಿತು ಕಪ್

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸುವ ಮೂಲಕ ಆರ್‌ಸಿಬಿ ಮಹಿಳಾ ತಂಡ ತನ್ನ ಎರಡನೇ ಆವೃತ್ತಿಯಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ 16 ವರ್ಷಗಳ ಟ್ರೋಫಿ ಕನಸನ್ನು ನನಸಾಗಿಸಿದೆ. ಆರ್‌ಸಿಬಿ ಪುರುಷರ ತಂಡಕ್ಕಿಂತ ಮುನ್ನ ಮಹಿಳಾ ತಂಡ ಟ್ರೋಫಿ ಗೆದ್ದಿರುವುದು ವಿಶೇಷವಾಗಿದೆ. 2024ರ ಐಪಿಎಲ್‌ಗೆ ಮುನ್ನ ಬುಧವಾರ, ಮಾರ್ಚ್ 19ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ “ಆರ್‌ಸಿಬಿ ಅನ್‌ಬಾಕ್ಸ್’ ಈವೆಂಟ್‌ಗೆ ಚೊಚ್ಚಲ ಟ್ರೋಫಿಯೊಂದಿಗೆ ಆರ್‌ಸಿಬಿ ಮಹಿಳಾ ತಂಡ ತವರಿಗೆ ಮರಳಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಉತ್ತಮ ಆರಂಭದ ಹೊರತಾಗಿಯೂ ಆರ್‌ಸಿಬಿ ಸ್ಪಿನ್ನರ್‌ಗಳ ಮಾರಕ ದಾಳಿಗೆ ಸಿಲುಕಿ 18.3 ಓವರ್‌ಗಳಲ್ಲಿ ಕೇವಲ 113 ರನ್‌ಗಳಿಗೆ ಸರ್ವಪತನ ಕಂಡಿತು.
ಪ್ರಶಸ್ತಿ ಗೆಲುವಿಗೆ 114 ರನ್‌ಗಳ ಗುರಿ ಪಡೆದ ಆರ್‌ಸಿಬಿ ತಂಡ ಸೋಫಿ ಡಿವೈನ್, ಸ್ಮೃತಿ ಮಂಧಾನ ಮತ್ತು ಎಲ್ಲಿಸ್ ಪೆರ್ರಿ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.
ಗೆಲುವಿಗೆ ಕೊನೆಯ ಓವರ್‌ನಲ್ಲಿ ಆರ್‌ಸಿಬಿ ತಂಡಕ್ಕೆ 5 ರನ್ ಬೇಕಾಗಿದ್ದಾಗ ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್ ಆಟವಾಡುತ್ತಿದ್ದು ಕೊನೆಯ ಓವರ್ ನ ಮೂರನೇ ಬಾಲಿನಲ್ಲಿ ರಿಚಾ ಘೋಷ್ ಬೌಂಡರಿ ಬಾರಿಸುವ ಮೂಲಕ ಆರ್‌ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಪ್ರತಿ ಬಾರಿಯೂ ಅಭಿಮಾನಿಗಳು ‘ಈ ಸಲ ಕಪ್ ನಮ್ದೇ’ ಎಂದು ಹೇಳಿಕೊಳ್ಳುತ್ತಿದ್ದರು ಆದರೆ ಈ ಬಾರಿ ಮಹಿಳೆಯರಿಂದ ಅಭಿಮಾನಿಗಳ ಕನಸು ನನಸಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago