Latest

ಕೊನೆಗೂ ಆರ್.ಸಿ.ಬಿ ಗೆ ಒಲಿಯಿತು ಕಪ್

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸುವ ಮೂಲಕ ಆರ್‌ಸಿಬಿ ಮಹಿಳಾ ತಂಡ ತನ್ನ ಎರಡನೇ ಆವೃತ್ತಿಯಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ 16 ವರ್ಷಗಳ ಟ್ರೋಫಿ ಕನಸನ್ನು ನನಸಾಗಿಸಿದೆ. ಆರ್‌ಸಿಬಿ ಪುರುಷರ ತಂಡಕ್ಕಿಂತ ಮುನ್ನ ಮಹಿಳಾ ತಂಡ ಟ್ರೋಫಿ ಗೆದ್ದಿರುವುದು ವಿಶೇಷವಾಗಿದೆ. 2024ರ ಐಪಿಎಲ್‌ಗೆ ಮುನ್ನ ಬುಧವಾರ, ಮಾರ್ಚ್ 19ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ “ಆರ್‌ಸಿಬಿ ಅನ್‌ಬಾಕ್ಸ್’ ಈವೆಂಟ್‌ಗೆ ಚೊಚ್ಚಲ ಟ್ರೋಫಿಯೊಂದಿಗೆ ಆರ್‌ಸಿಬಿ ಮಹಿಳಾ ತಂಡ ತವರಿಗೆ ಮರಳಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಉತ್ತಮ ಆರಂಭದ ಹೊರತಾಗಿಯೂ ಆರ್‌ಸಿಬಿ ಸ್ಪಿನ್ನರ್‌ಗಳ ಮಾರಕ ದಾಳಿಗೆ ಸಿಲುಕಿ 18.3 ಓವರ್‌ಗಳಲ್ಲಿ ಕೇವಲ 113 ರನ್‌ಗಳಿಗೆ ಸರ್ವಪತನ ಕಂಡಿತು.
ಪ್ರಶಸ್ತಿ ಗೆಲುವಿಗೆ 114 ರನ್‌ಗಳ ಗುರಿ ಪಡೆದ ಆರ್‌ಸಿಬಿ ತಂಡ ಸೋಫಿ ಡಿವೈನ್, ಸ್ಮೃತಿ ಮಂಧಾನ ಮತ್ತು ಎಲ್ಲಿಸ್ ಪೆರ್ರಿ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.
ಗೆಲುವಿಗೆ ಕೊನೆಯ ಓವರ್‌ನಲ್ಲಿ ಆರ್‌ಸಿಬಿ ತಂಡಕ್ಕೆ 5 ರನ್ ಬೇಕಾಗಿದ್ದಾಗ ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್ ಆಟವಾಡುತ್ತಿದ್ದು ಕೊನೆಯ ಓವರ್ ನ ಮೂರನೇ ಬಾಲಿನಲ್ಲಿ ರಿಚಾ ಘೋಷ್ ಬೌಂಡರಿ ಬಾರಿಸುವ ಮೂಲಕ ಆರ್‌ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಪ್ರತಿ ಬಾರಿಯೂ ಅಭಿಮಾನಿಗಳು ‘ಈ ಸಲ ಕಪ್ ನಮ್ದೇ’ ಎಂದು ಹೇಳಿಕೊಳ್ಳುತ್ತಿದ್ದರು ಆದರೆ ಈ ಬಾರಿ ಮಹಿಳೆಯರಿಂದ ಅಭಿಮಾನಿಗಳ ಕನಸು ನನಸಾಗಿದೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

3 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

3 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

3 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

3 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

18 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

18 hours ago