Latest

ಕೊನೆಗೂ ಆರ್.ಸಿ.ಬಿ ಗೆ ಒಲಿಯಿತು ಕಪ್

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸುವ ಮೂಲಕ ಆರ್‌ಸಿಬಿ ಮಹಿಳಾ ತಂಡ ತನ್ನ ಎರಡನೇ ಆವೃತ್ತಿಯಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ 16 ವರ್ಷಗಳ ಟ್ರೋಫಿ ಕನಸನ್ನು ನನಸಾಗಿಸಿದೆ. ಆರ್‌ಸಿಬಿ ಪುರುಷರ ತಂಡಕ್ಕಿಂತ ಮುನ್ನ ಮಹಿಳಾ ತಂಡ ಟ್ರೋಫಿ ಗೆದ್ದಿರುವುದು ವಿಶೇಷವಾಗಿದೆ. 2024ರ ಐಪಿಎಲ್‌ಗೆ ಮುನ್ನ ಬುಧವಾರ, ಮಾರ್ಚ್ 19ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ “ಆರ್‌ಸಿಬಿ ಅನ್‌ಬಾಕ್ಸ್’ ಈವೆಂಟ್‌ಗೆ ಚೊಚ್ಚಲ ಟ್ರೋಫಿಯೊಂದಿಗೆ ಆರ್‌ಸಿಬಿ ಮಹಿಳಾ ತಂಡ ತವರಿಗೆ ಮರಳಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಉತ್ತಮ ಆರಂಭದ ಹೊರತಾಗಿಯೂ ಆರ್‌ಸಿಬಿ ಸ್ಪಿನ್ನರ್‌ಗಳ ಮಾರಕ ದಾಳಿಗೆ ಸಿಲುಕಿ 18.3 ಓವರ್‌ಗಳಲ್ಲಿ ಕೇವಲ 113 ರನ್‌ಗಳಿಗೆ ಸರ್ವಪತನ ಕಂಡಿತು.
ಪ್ರಶಸ್ತಿ ಗೆಲುವಿಗೆ 114 ರನ್‌ಗಳ ಗುರಿ ಪಡೆದ ಆರ್‌ಸಿಬಿ ತಂಡ ಸೋಫಿ ಡಿವೈನ್, ಸ್ಮೃತಿ ಮಂಧಾನ ಮತ್ತು ಎಲ್ಲಿಸ್ ಪೆರ್ರಿ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.
ಗೆಲುವಿಗೆ ಕೊನೆಯ ಓವರ್‌ನಲ್ಲಿ ಆರ್‌ಸಿಬಿ ತಂಡಕ್ಕೆ 5 ರನ್ ಬೇಕಾಗಿದ್ದಾಗ ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್ ಆಟವಾಡುತ್ತಿದ್ದು ಕೊನೆಯ ಓವರ್ ನ ಮೂರನೇ ಬಾಲಿನಲ್ಲಿ ರಿಚಾ ಘೋಷ್ ಬೌಂಡರಿ ಬಾರಿಸುವ ಮೂಲಕ ಆರ್‌ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಪ್ರತಿ ಬಾರಿಯೂ ಅಭಿಮಾನಿಗಳು ‘ಈ ಸಲ ಕಪ್ ನಮ್ದೇ’ ಎಂದು ಹೇಳಿಕೊಳ್ಳುತ್ತಿದ್ದರು ಆದರೆ ಈ ಬಾರಿ ಮಹಿಳೆಯರಿಂದ ಅಭಿಮಾನಿಗಳ ಕನಸು ನನಸಾಗಿದೆ.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

12 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

13 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

13 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

13 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

13 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

18 hours ago