Latest

ಬೆಂಗಳೂರಲ್ಲಿ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಹಾಕಿದರೆ ದಂಡ ಮತ್ತು ಜೈಲು ಶಿಕ್ಷೆ

ಬಿಬಿಎಂಪಿ ವ್ಯಾಪ್ತಿಯ ಅನಧಿಕೃತ ವಾಣಿಜ್ಯ ಜಾಹೀರಾತುಗಳು ಮತ್ತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತಿತರೇ ಮುದ್ರಿತ ಜಾಹೀರಾತುಗಳನ್ನು ನಿಷೇಧಿಸಲಾಗಿದೆ. ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018′ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ ಅನುಮತಿಸಲು ಮಾತ್ರ ಅವಕಾಶವಿದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದೆ.
ಆದ್ರೂ ಕೂಡ ಮತ್ತೆ ಮತ್ತೆ ಜಾಹೀರಾತು ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಕಂದಾಯ/ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಉತ್ಪನ್ನ ಮತ್ತು ಸೇವೆಗಳನ್ನು ಒದಗಿಸುವ ಕಂಪನಿ ಅಥವಾ ಉತ್ಪಾದಕರು ತಮ್ಮ ಉತ್ಪನ್ನಗಳ ಬಗ್ಗೆ ವಾಣಿಜ್ಯ ಜಾಹೀರಾತುಗಳ ಮೂಲಕ ಸಾರ್ವಜನಿಕ ಪ್ರದರ್ಶನ ಮಾಡುವಲ್ಲಿ ಖಾಸಗಿ ಏಜೆನ್ಸಿಗಳು ಅಧಿಕೃತವಾಗಿ ಬಿಬಿಎಂಪಿಯಿಂದ ಪರವಾನಿಗೆ ಪಡೆದಿರುವ ಏಜೆನ್ಸಿಗಳ ಮೂಲಕ ವಾಣಿಜ್ಯ ಜಾಹೀರಾತು ಪ್ರದರ್ಶನ ಮಾಡುವುದು. ಅದರ ಹೊರತಾಗಿ ಜಾಹೀರಾತು ಪ್ರಕಟಸುವಂತಹ ಕಂಪನಿ ಅಥವಾ ಉತ್ಪಾದಕರು ಹಾಗೂ ಪ್ರಕಟಣಾಗಾರರ ಮತ್ತು ಮುದ್ರಣಗಾರರು ಮತ್ತು ಸಂಬಂಧಪಟ್ಟ ಅನಧಿಕೃತ ಏಜೆನ್ಸಿಗಳ ಹಾಗೂ ಪ್ಲೆಕ್ಸ್ ಬ್ಯಾನರ್‌ಗಳಲ್ಲಿ ಭಾವಚಿತ್ರವಿರುವ ವ್ಯಕ್ತಿಗಳ ವಿರುದ್ಧ ಕರ್ನಾಟಕ ಮುಕ್ತ ಸ್ಥಳಗಳ ವಿರೂಪಗೊಳಿಸುವಿಕೆ ತಡೆ ಕಾಯ್ದೆ 1981ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೊತಗೆ ,6 ತಿಂಗಳವರೆಗಿನ ಕಾರಾವಾಸ ಅಥವಾ 1,000 ರೂಪಾಯಿ ವರೆಗೆ ದಂಡ ವಿಧಿಸಲಾಗುವುದು ಎಂದು ಕಂದಾಯ ಹಾಗೂ ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್ ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago