ಬಳ್ಳಾರಿ, ಆಗಸ್ಟ್ 7 – ದಾವಣಗೆರೆ-ಬಳ್ಳಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ, ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹಲ್ಲೆ ಮಾಡಿದ ಘಟನೆ ಇದೀಗ ಸದ್ದು ಮಾಡುತ್ತಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಈ ಪ್ರಕರಣಕ್ಕೆ ತೀವ್ರತೆ ಸಿಕ್ಕಿದ್ದು, ಸಂಬಂಧಿಸಿದ ಪೊಲೀಸ್ ಅಧಿಕಾರಿ ವಿರುದ್ಧ FIR ದಾಖಲಾಗಿದೆ.
ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ದಾವಣಗೆರೆ ಮೂಲದಿಂದ ಬಳ್ಳಾರಿಗೆ ತೆರಳುತ್ತಿದ್ದ KSRTC ಬಸ್ (ನಂ. KA17 F 1483) ಗಜಾಪುರ ಗ್ರಾಮ ಬಳಿ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಎಡಬದಿಗೆ ಹರಿದು ಸಾಗಿದ ವೇಳೆ, ಅದೆ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ಗೆ ತಾಗಿದೆ. ಆಯಾ ಬೈಕ್ ಸವಾರರು ಕೂಡ್ಲಿಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಎನ್ನಲಾಗಿದ್ದು, ಅವರು ತಕ್ಷಣವೇ ಬಸ್ಸು ಅಡ್ಡಗಟ್ಟು ಚಾಲಕ ರಾಮಲಿಂಗಪ್ಪ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ.
ಈ ಕುರಿತು KSRTC ಸಂಸ್ಥೆ ಪ್ರತ್ಯೇಕ ಪತ್ರಿಕಾ ಪ್ರಕಟಣೆ ನೀಡಿದ್ದು, ಘಟನೆ ನಂತರವೊಂದೆ ತನ್ನ ಚಾಲಕನಿಗೆ ಬೆಂಬಲ ನೀಡಿದ ಸಂಸ್ಥೆ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ಸಚಿವರು KSRTC ವ್ಯವಸ್ಥಾಪಕ ನಿರ್ದೇಶಕರಿಗೆ ಆರೋಪಿಗೆ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಸಂಸ್ಥೆ ತಕ್ಷಣವೇ ವಿಜಯನಗರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ಪರಿಣಾಮವಾಗಿ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿಯೇ ಮಂಜುನಾಥ್ ವಿರುದ್ಧ ಏರ್ಪಡಿಸಿದ ಹಲ್ಲೆ ಪ್ರಕರಣದಡಿ FIR ದಾಖಲಾಗಿದೆ.
ಈ ಘಟನೆ ಸಾರಿಗೆ ಸಿಬ್ಬಂದಿಯಲ್ಲಿ ಆಕ್ರೋಶ ಹುಟ್ಟುಹಾಕಿದ್ದು, ಕರ್ತವ್ಯದಲ್ಲಿರುವ ಸಿಬ್ಬಂದಿಯ ಮೇಲಿನ ದೌರ್ಜನ್ಯವನ್ನು ಸಹಿಸಲಾಗದು ಎಂಬ ಮಾತುಗಳು ಕೇಳಿಬರುತ್ತಿವೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…