Categories: CrimeLatest

7 ವರ್ಷದ ಪ್ರೀತಿ, ಗರ್ಭಿಣಿ ಪತ್ನಿಗೆ ದ್ರೋಹ: ಮತ್ತೊಂದು ಮದುವೆಗೆ ಸಿದ್ಧನಾದ ಪತಿ ವಿರುದ್ಧ FIR

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಪ್ರೀತಿಸಿ ಮದುವೆಯಾದ ಬಳಿಕ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.

ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ನಿವಾಸಿಯಾದ ಸಂತ್ರಸ್ತೆ, ಸುಮಾರು ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್ ಕಾರ್ಡ್ ಮಾಡಿಸಲು ಹೋಗಿದ್ದ ವೇಳೆ ಆರಂಭವಾದ ಈ ಪರಿಚಯ, ನಂತರ ಪ್ರೀತಿಗೆ ತಿರುಗಿತ್ತು. ಪೋಷಕರ ವಿರೋಧದ ನಡುವೆಯೂ ಇಬ್ಬರೂ ಪಾವಗಡದ ದೇವಸ್ಥಾನದಲ್ಲಿ ವಿವಾಹವಾಗಿದ್ದರು.

ಮದುವೆಯಾದ ಬಳಿಕ ಸುಮಾರು ಒಂದೂವರೆ ವರ್ಷ ಸುಖ ಜೀವನ ನಡೆಸಿದ ಜೋಡಿಗೆ, ನಂತರ ಸಮಸ್ಯೆಗಳು ಎದುರಾದವು. ಗರ್ಭಿಣಿಯಾಗಿದ್ದ ಪತ್ನಿಯನ್ನು ಬೊಮ್ಮಾನಾಯಕ್ ತನ್ನ ಪೋಷಕರ ಮಾತಿಗೆ ಮರುಳಾಗಿ ದೂರ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಇದೇ ವೇಳೆ ಆತನ ಕುಟುಂಬದವರು ಮತ್ತೊಂದು ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಷಯವನ್ನು ಪ್ರಶ್ನಿಸಿದಾಗ, ಪತಿ ಹಾಗೂ ಅವರ ಕುಟುಂಬಸ್ಥರು ಜಾತಿ ನಿಂದನೆ, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಆರು ತಿಂಗಳ ಗರ್ಭಿಣಿಯಾಗಿರುವ ಯುವತಿ ತನ್ನ ಹಾಗೂ ಗರ್ಭದಲ್ಲಿರುವ ಮಗುವಿನ ಭವಿಷ್ಯಕ್ಕಾಗಿ ನ್ಯಾಯ ಕೋರುತ್ತಿದ್ದು, “ನನಗೆ ನನ್ನ ಗಂಡ ಬೇಕು” ಎಂದು ಬೇಡಿಕೆ ಇಟ್ಟಿದ್ದಾಳೆ. ಈ ಸಂಬಂಧ ಬೊಮ್ಮಾನಾಯಕ್, ಅವರ ತಾಯಿ ಕರಿಯಮ್ಮ ಸೇರಿದಂತೆ ನಾಲ್ವರ ವಿರುದ್ಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

5 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

5 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago