ಕೊಟ್ಟೂರು:- ಪಟ್ಟಣದ ಬಸ್ ನಿಲ್ದಾಣದ ಹತ್ತಿರವಿರುವ ವೆಂಕಟೇಶ್ವರ ಅಯ್ಯಂಗಾರ್ ಬೇಕರಿಯ ಹಿಂಭಾಗದಲ್ಲಿ ಇಂದು ಸಂಜೆ 7 ಘಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ಅವಘಡ ನಡೆದಿದೆ.
ವೆಂಕಟೇಶ್ವರ ಅಯ್ಯಂಗಾರ್ ಬೇಕರಿಯ ಹಿಂಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನೋಡಿ ಜನರು ಓಡೋಡಿ ಬಂದು ಬೇಕರಿಯವರಿಗೆ ತಿಳಿಸಿದರು.ನಂತರ ಬೇಕರಿಯಲ್ಲಿ ಇದ್ದ ಜನರು ಹೊರಗಡೆ ಬಂದು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು.ಧಗಧಗನೆ ಬೆಂಕಿ ಹೊತ್ತಿಕೊಂಡ ಬಳಿಕ ದಟ್ಟ ಹೊಗೆ ಆವರಿಸಿಕೊಂಡಿತು.ಬೆಂಕಿ ಹತ್ತಿಕೊಂಡ ವಿಷಯ ತಿಳಿದ ಅಕ್ಕ ಪಕ್ಕದ ಅಂಗಡಿಯವರು ಹಾಗೂ ನಿವಾಸಿಗಳು ಹೊರಗಡೆ ಬಂದು ತಮ್ಮ ಜೀವವನ್ನು ಉಳಿಸಿಕೊಂಡಿದ್ದಾರೆ.ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ವಾಹನ ಬಂದು ಬೆಂಕಿ ನಂದಿಸಿತು.ಬೇಕರಿಯ ಪಕ್ಕದಲ್ಲಿರುವ ಮೊಬೈಲ್ ಶಾಪ್ ಹಾಗೂ ಬಳೆ ಅಂಗಡಿಯ ಸಾಮಾಗ್ರಿಗಳು ಸಂಪೂರ್ಣವಾಗಿ ಸುಟ್ಟಿರುವುದು ಎಂದು ತಿಳಿದು ಬಂದಿದೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಘಟನೆ ನಡೆದ ಸ್ಥಳಕ್ಕೆ ಪಿಎಸ್ಐ ಗೀತಾಂಜಲಿ ಶಿಂಧೆ,ಅಗ್ನಿ ಶಾಮಕ ದಳದ ಸಿಬ್ಬಂದಿ ವರ್ಗದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು.
ವರದಿ:- ಮಣಿಕಂಠ. ಬಿ
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…