ಕೊಟ್ಟೂರು:- ಪಟ್ಟಣದ ಬಸ್ ನಿಲ್ದಾಣದ ಹತ್ತಿರವಿರುವ ವೆಂಕಟೇಶ್ವರ ಅಯ್ಯಂಗಾರ್ ಬೇಕರಿಯ ಹಿಂಭಾಗದಲ್ಲಿ ಇಂದು ಸಂಜೆ 7 ಘಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ಅವಘಡ ನಡೆದಿದೆ.
ವೆಂಕಟೇಶ್ವರ ಅಯ್ಯಂಗಾರ್ ಬೇಕರಿಯ ಹಿಂಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನೋಡಿ ಜನರು ಓಡೋಡಿ ಬಂದು ಬೇಕರಿಯವರಿಗೆ ತಿಳಿಸಿದರು.ನಂತರ ಬೇಕರಿಯಲ್ಲಿ ಇದ್ದ ಜನರು ಹೊರಗಡೆ ಬಂದು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು.ಧಗಧಗನೆ ಬೆಂಕಿ ಹೊತ್ತಿಕೊಂಡ ಬಳಿಕ ದಟ್ಟ ಹೊಗೆ ಆವರಿಸಿಕೊಂಡಿತು.ಬೆಂಕಿ ಹತ್ತಿಕೊಂಡ ವಿಷಯ ತಿಳಿದ ಅಕ್ಕ ಪಕ್ಕದ ಅಂಗಡಿಯವರು ಹಾಗೂ ನಿವಾಸಿಗಳು ಹೊರಗಡೆ ಬಂದು ತಮ್ಮ ಜೀವವನ್ನು ಉಳಿಸಿಕೊಂಡಿದ್ದಾರೆ.ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ವಾಹನ ಬಂದು ಬೆಂಕಿ ನಂದಿಸಿತು.ಬೇಕರಿಯ ಪಕ್ಕದಲ್ಲಿರುವ ಮೊಬೈಲ್ ಶಾಪ್ ಹಾಗೂ ಬಳೆ ಅಂಗಡಿಯ ಸಾಮಾಗ್ರಿಗಳು ಸಂಪೂರ್ಣವಾಗಿ ಸುಟ್ಟಿರುವುದು ಎಂದು ತಿಳಿದು ಬಂದಿದೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಘಟನೆ ನಡೆದ ಸ್ಥಳಕ್ಕೆ ಪಿಎಸ್ಐ ಗೀತಾಂಜಲಿ ಶಿಂಧೆ,ಅಗ್ನಿ ಶಾಮಕ ದಳದ ಸಿಬ್ಬಂದಿ ವರ್ಗದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು.
ವರದಿ:- ಮಣಿಕಂಠ. ಬಿ
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…