ಪಟ್ಟಣದ ಗಾಂಧಿ ವೃತ್ತದಲ್ಲಿರುವ ಮೆಡಿಕಲ್ ಅಂಗಡಿಯಲ್ಲಿ ಶುಕ್ರವಾರ (ಏಪ್ರಿಲ್ 12) ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕಿಟ್ನಿಂದ ಭಾರಿ ಅಗ್ನಿ ಅವಘಡ ನಡೆದಿದೆ. ಈ ವೇಳೆ ಅಂಗಡಿಯಲ್ಲಿ ಸಂಗ್ರಹಿಸಿದ್ದ ಔಷಧಿಗಳು, ನಗದು ಹಾಗೂ ಇತರ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ರಾತ್ರಿ ಸುಮಾರು 1 ಗಂಟೆಗೆ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸುತ್ತಮುತ್ತಲಿನ ನಿವಾಸಿಗಳು ದಟ್ಟ ಹೊಗೆಯನ್ನು ಗಮನಿಸಿ ತಕ್ಷಣ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದರು. ಆದರೆ, ಇತರರು ಬಕೆಟ್ ನೀರಿನಿಂದ ಬೆಂಕಿಯನ್ನು ನಂದಿಸಲು ಯತ್ನಿಸಿದರೂ ಆಗಲೇ ಬೆಂಕಿ ವ್ಯಾಪಕವಾಗಿ ಹರಡಿತ್ತು.
ಘಟನೆ ಸಂಭವಿಸಿದ ಸಂದರ್ಭದಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದ ಕಾರಣ ಅಂಗಡಿಯೊಳಗಿನ ಎಲ್ಲಾ ವಸ್ತುಗಳು ಕೆಲವೇ ನಿಮಿಷಗಳಲ್ಲಿ ಸುಟ್ಟು ಹೋಗಿ ನಾಶವಾದವು. ಆದರೆ, ನೆರೆಯ ಅಂಗಡಿ ಮಾಲಿಕರು ಸಹಕಾರ ನೀಡಿದ್ದು, ತಮ್ಮ ಅಂಗಡಿಗಳಲ್ಲಿದ್ದ ವಸ್ತುಗಳನ್ನು ತಕ್ಷಣವೇ ಹೊರತೆಗೆದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಯಿತು.
ಸುದ್ದೆ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತಂದರು. ಆದರೆ ಆಗಾಗಲೇ ಮೆಡಿಕಲ್ ಅಂಗಡಿಯೊಳಗಿನ ಔಷಧಿ, ನಗದು ಹಣ, ಫ್ರೀಜ್ಗಳು, ಮೆಜ್, ಕೂರಿ ಸೇರಿದಂತೆ ಎಲ್ಲವೂ ಭಸ್ಮವಾಗಿತ್ತು.
ಪ್ರಾಥಮಿಕ ಮಾಹಿತಿಯಂತೆ, ಸುಮಾರು ಐದುರಿಂದ ಆರು ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿರುವ ಸಾಧ್ಯತೆ ಇದೆ. ಘಟನೆ ಸಂಬಂಧ ತನಿಖೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…