Latest

ಹೊಸ ಹುಲ್ಲಿಗಾಗಿ ಬೆಂಕಿ: 30 ಎಕರೆ ಅರಣ್ಯ ಸುಟ್ಟು ಭಸ್ಮ, ಆರೋಪಿಯ ಬಂಧನ

ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ಬೆಂಕಿ ಹಚ್ಚಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಸುಟ್ಟು ಭಸ್ಮವಾಗಿದ ಘಟನೆ ನಡೆದಿದೆ. ಈ ಸಂಬಂಧ 42 ವರ್ಷದ ರಾಜಪ್ಪ ಎಂಬ ಕುರಿಗಾಹಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಕಿ ಹಚ್ಚಿದ ಕಾರಣವೇನು?

ಮಂಗಳವಾರ, ರಾಜಪ್ಪ ತನ್ನ ಮೇಕೆಗಳನ್ನು ಮೇಯಿಸಲು ಸಂಗಮ ವನ್ಯಜೀವಿ ವಲಯದ ಅರಣ್ಯ ಪ್ರದೇಶಕ್ಕೆ ತೆರಳಿದ್ದನು. ಅರಣ್ಯದಲ್ಲಿದ್ದ ಒಣ ಹುಲ್ಲು ಸುಟ್ಟರೆ ಹೊಸ ಹುಲ್ಲು ಚಿಗುರುತ್ತದೆ, ಇದರಿಂದ ಕುರಿ-ಮೇಕೆಗಳಿಗೆ ಮೇವು ಲಭ್ಯವಾಗುತ್ತದೆ ಎಂಬ ಉದ್ದೇಶದಿಂದ ಬೆಂಕಿ ಹಚ್ಚಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಅಗ್ನಿ ಅವಘಡ: ವನ್ಯಜೀವಿಗಳ ಪ್ರಾಣಹಾನಿ

ಬೆಂಕಿಯ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಗ್ನಿ ನಂದಿಸಲು ಹರಸಾಹಸ ಪಟ್ಟರು. ಆದರೆ ಆಗಲೇ 30 ಎಕರೆ ಅರಣ್ಯ ಭಸ್ಮವಾಗಿತ್ತು. ಈ ಅವಘಡದಲ್ಲಿ ಕೆಲವು ವನ್ಯಜೀವಿಗಳು ಸಹ ಸಾವನ್ನಪ್ಪಿದರೆಂದು ಶಂಕಿಸಲಾಗಿದೆ. ಪ್ರಾಥಮಿಕ ಮಾಹಿತಿಯಂತೆ ಒಂದು ಹೆಬ್ಬಾವು ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವುದು ದೃಢಪಟ್ಟಿದೆ.

ಆರೋಪಿ ಬಂಧನ, ಕಾನೂನು ಕ್ರಮ

ಘಟನೆ ನಡೆದ ಸ್ಥಳದಲ್ಲೇ ರಾಜಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನು ಬೆಂಕಿ ಹಚ್ಚಿದುದನ್ನು ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕೃತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಹಂತದ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಘಟನೆ ಜೈವಿಕ ಸಮತೋಲನಕ್ಕೆ ಅಪಾಯ ಉಂಟುಮಾಡಿದ್ದು, ಅರಣ್ಯ ಸುಡುವ ಕೃತ್ಯವು ಗಂಭೀರ ಅಪರಾಧ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

3 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

3 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

3 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

13 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

13 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

16 hours ago