Latest

ಸಾಲದಲ್ಲಿ ಖರೀದಿಸಿದ ವ್ಯಾಪಾರ ವಾಹನಕ್ಕೆ ಬೆಂಕಿ: ಕೆಂಬಾರೆ ಗ್ರಾಮದ ದಂಪತಿಗೆ ಲಕ್ಷಾಂತರ ನಷ್ಟ.

ಬೆಳ್ಳೂರು ತಾಲ್ಲೂಕಿನ ಕೆಂಬಾರೆ ಗ್ರಾಮದಲ್ಲಿ ನಡೆದ ಒಂದು ದುರ್ಭಾಗ್ಯಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬಿಟ್ಟಿದೆ. ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಗೀತಾ–ಮಹೇಶ್ ದಂಪತಿಯವರ ವಾಹನಕ್ಕೆ ಗುರುವಾರ ಮಧ್ಯರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.

ಅಶೋಕ್ ಲೈಲ್ಯಾಂಡ್ ವಾಹನವೊಂದು ಹಾಗೂ ಅದರೊಳಗೆ ಇಡಲಾಗಿದ್ದ ಸುಮಾರು ₹2 ಲಕ್ಷ ಮೌಲ್ಯದ ಆಟಿಕೆ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು ನಷ್ಟದ ಅಂದಾಜು ₹7 ಲಕ್ಷದಷ್ಟಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ದಂಪತಿ ಮಕ್ಕಳ ಆಟದ ಸಾಮಗ್ರಿಗಳನ್ನು ಖರೀದಿಸಲು ಸಾಲ ಪಡೆದಿದ್ದನ್ನು ಹೇಳಿದ ಮಹೇಶ್, “ಹಬ್ಬದ ವೇಳೆಗೆ ವ್ಯಾಪಾರಕ್ಕಾಗಿ ಬೆನ್ನೆಲುಬಾಗಿ ಇರುವ ಈ ವಾಹನವನ್ನು ಮನೆ ಮುಂದೆ ನಿಲ್ಲಿಸಿದ್ದೆವು. ಆದರೆ ರಾತ್ರಿ 2.30ರ ಸುಮಾರಿಗೆ ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿಕೊಂಡಿದೆ. ನಾವು ಸಂಪೂರ್ಣವಾಗಿ ನೆಲಕಚ್ಚಿದ್ದೇವೆ. ನಮ್ಮ ಕುಟುಂಬಕ್ಕೆ ನ್ಯಾಯ ಬೇಕು” ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಗ್ರಾಮದಲ್ಲಿ ಸುಮಾರು 15 ದಿನಗಳ ಹಿಂದೆಯೂ ಇಂತಹದ್ದೇ ರೀತಿಯ ಘಟನೆ ನಡೆದಿದ್ದು, ಪಲ್ಸರ್ ಬೈಕ್‌ಗೆ ಬೆಂಕಿ ಹಚ್ಚಲಾಗಿತ್ತು ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ.

ಘಟನೆಯ ಮಾಹಿತಿ ಪಡೆದ ಬೆಳ್ಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಘಟನೆಯಿಂದಾಗಿ ವಾಹನವನ್ನೇ ಬದುಕಿನಾಧಾರವಾಗಿಸಿಕೊಂಡಿದ್ದ ಕುಟುಂಬ ಇನ್ನೇನು ಮಾಡುವೆಂಬ ದುಃಖದಲ್ಲಿ ಮುಳುಗಿದೆ. ಕಿಡಿಗೇಡಿಗಳ ವಿರುದ್ಧ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಆಗ್ರಹ ಸ್ಥಳೀಯರಿಂದ ಕೇಳಿಬರುತ್ತಿದೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

18 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago