Latest

ಸಾಲದಲ್ಲಿ ಖರೀದಿಸಿದ ವ್ಯಾಪಾರ ವಾಹನಕ್ಕೆ ಬೆಂಕಿ: ಕೆಂಬಾರೆ ಗ್ರಾಮದ ದಂಪತಿಗೆ ಲಕ್ಷಾಂತರ ನಷ್ಟ.

ಬೆಳ್ಳೂರು ತಾಲ್ಲೂಕಿನ ಕೆಂಬಾರೆ ಗ್ರಾಮದಲ್ಲಿ ನಡೆದ ಒಂದು ದುರ್ಭಾಗ್ಯಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬಿಟ್ಟಿದೆ. ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಗೀತಾ–ಮಹೇಶ್ ದಂಪತಿಯವರ ವಾಹನಕ್ಕೆ ಗುರುವಾರ ಮಧ್ಯರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.

ಅಶೋಕ್ ಲೈಲ್ಯಾಂಡ್ ವಾಹನವೊಂದು ಹಾಗೂ ಅದರೊಳಗೆ ಇಡಲಾಗಿದ್ದ ಸುಮಾರು ₹2 ಲಕ್ಷ ಮೌಲ್ಯದ ಆಟಿಕೆ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು ನಷ್ಟದ ಅಂದಾಜು ₹7 ಲಕ್ಷದಷ್ಟಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ದಂಪತಿ ಮಕ್ಕಳ ಆಟದ ಸಾಮಗ್ರಿಗಳನ್ನು ಖರೀದಿಸಲು ಸಾಲ ಪಡೆದಿದ್ದನ್ನು ಹೇಳಿದ ಮಹೇಶ್, “ಹಬ್ಬದ ವೇಳೆಗೆ ವ್ಯಾಪಾರಕ್ಕಾಗಿ ಬೆನ್ನೆಲುಬಾಗಿ ಇರುವ ಈ ವಾಹನವನ್ನು ಮನೆ ಮುಂದೆ ನಿಲ್ಲಿಸಿದ್ದೆವು. ಆದರೆ ರಾತ್ರಿ 2.30ರ ಸುಮಾರಿಗೆ ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿಕೊಂಡಿದೆ. ನಾವು ಸಂಪೂರ್ಣವಾಗಿ ನೆಲಕಚ್ಚಿದ್ದೇವೆ. ನಮ್ಮ ಕುಟುಂಬಕ್ಕೆ ನ್ಯಾಯ ಬೇಕು” ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಗ್ರಾಮದಲ್ಲಿ ಸುಮಾರು 15 ದಿನಗಳ ಹಿಂದೆಯೂ ಇಂತಹದ್ದೇ ರೀತಿಯ ಘಟನೆ ನಡೆದಿದ್ದು, ಪಲ್ಸರ್ ಬೈಕ್‌ಗೆ ಬೆಂಕಿ ಹಚ್ಚಲಾಗಿತ್ತು ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ.

ಘಟನೆಯ ಮಾಹಿತಿ ಪಡೆದ ಬೆಳ್ಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಘಟನೆಯಿಂದಾಗಿ ವಾಹನವನ್ನೇ ಬದುಕಿನಾಧಾರವಾಗಿಸಿಕೊಂಡಿದ್ದ ಕುಟುಂಬ ಇನ್ನೇನು ಮಾಡುವೆಂಬ ದುಃಖದಲ್ಲಿ ಮುಳುಗಿದೆ. ಕಿಡಿಗೇಡಿಗಳ ವಿರುದ್ಧ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಆಗ್ರಹ ಸ್ಥಳೀಯರಿಂದ ಕೇಳಿಬರುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago