ಉತ್ತರ ಕನ್ನಡ:-ಅಂಕೋಲಾದ ರಾಮನಗುಳಿ ಬಳಿ ಅನಾಥವಾಗಿದ್ದ ಕಾರಿನಲ್ಲಿ ಕೋಟಿ ರೂ ಹಣ ಸಿಕ್ಕಿದ ಪ್ರಕರಣದ ಆರೋಪಿಗಳಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.
ಜನವರಿ 28ರಂದು ಹುಬ್ಬಳ್ಳಿ ಅಂಕೋಲಾ ಹೆದ್ದಾರಿ ಅಂಚಿನ ರಾಮನಗುಳಿ ಬಳಿ ಐಷಾರಾಮಿ ಕಾರೊಂದು ಅನಾಥವಾಗಿ ಬಿದ್ದಿತ್ತು. ಕಾರಿನ ಗ್ಲಾಸುಗಳು ಒಡೆದಿದ್ದರಿಂದ ಅನೇಕರು ಕಾರು ಅಪಘಾತವಾಗಿದೆ ಎಂದು ಭಾವಿಸಿದ್ದರು. ಪೊಲೀಸರು ಬಂದು ಪರಿಶೀಲಿಸಿದ್ದರು. ಆಗ, ಕಾರಿನ ಒಳಗೆ 1.14 ಲಕ್ಷ ರೂ ಹಣ ಪತ್ತೆಯಾಗಿದ್ದು, ಆ ಹಣದ ಜೊತೆ ಕಾರನ್ನು ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದರು.
ಪ್ರಕರಣದ ವಿಚಾರಣೆ ನಡೆಸಿದಾಗ ಮಂಗಳೂರು ಮೂಲದ ತಲ್ಲತ್ತ ಮತ್ತು ನವಫಾಲ ಆರೋಪಿತರು ಸಿಕ್ಕಿ ಬಿದ್ದಿದ್ದರು. ಮುಂಬೈಯಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆ ನಡೆಸಿದಾಗ ಕೋಟಿ ಹಣವಿರುವ ಕಾರನ್ನು ಕಳ್ಳರು ದರೋಡೆ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಆರೋಪಿತರನ್ನು ಗುರುವಾರ ಅಂಕೋಲಾ ಕಡೆ ಕರೆದೊಯ್ಯುತ್ತಿರುವಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದರು. ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿ ದಾಳಿ ಮಾಡಿದರು.
ಈ ಗುಂಡಿನ ಜಟಾಪಟಿಯಲ್ಲಿ ಮುಂಡಗೋಡದ ಪಿಎಸ್ಐ ಪರಶುರಾಮ್ ಮಿರ್ಜಗಿ ಅಂಕೋಲಾ ಪಿಎಸ್ಆಯ್ ಉದ್ದಪ್ಪ ಭೈರಪ್ಪನವರ, ಸಿಬ್ಬಂದಿಗಳಾದ ಯಲ್ಲಾಪುರದ ಬಸವರಾಜ ಹಗರಿ ಹಾಗು ಮುಂಡಗೋಡ ಠಾಣೆಯ ಕೋಟೇಶ ನಾಗರವಳ್ಳಿ ಕಾರ್ಯಾಚರಣೆಯಲ್ಲಿ ಗಾಯಗೊಂಡು ಅಂಕೋಲಾ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅಸ್ಪತ್ರೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…